January 14, 2026

Newsnap Kannada

The World at your finger tips!

farmer , deposit , PM yojana

ರಾಜ್ಯದ ರೈತರಿಗೆ ಸುವರ್ಣ ಅವಕಾಶ: ‘ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗದ ರೈತರಿಗೆ ಕೊಳವೆ ಬಾವಿ (ಬೋರ್‌ವೆಲ್) ಕೊರೆಸಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಬಳ್ಳಾರಿ ಜಿಲ್ಲೆಗೆ ರೂ. 153.53 ಲಕ್ಷಗಳ ಅನುದಾನ ಲಭ್ಯವಿದ್ದು, ಶೇಕಡಾ 90ರಷ್ಟು ಸಹಾಯಧನ ನೀಡಲಾಗುತ್ತದೆ. ಗರಿಷ್ಠ 2.00 ಹೆಕ್ಟೇರ್ ವರೆಗೆ ರೈತರು ಈ ಸೌಲಭ್ಯ ಪಡೆಯಬಹುದಾಗಿದೆ.

ಆಸಕ್ತ ರೈತ ಭಾಂದವರು ಅರ್ಜಿ ಸಲ್ಲಿಸಿ ಈ ಸಹಾಯಧನದ ಸದುಪಯೋಗ ಪಡೆದುಕೊಳ್ಳಬಹುದು.ಕರ್ತವ್ಯ ಲೋಪದ ಪರಿಣಾಮ: ಮೂವರು ಪೊಲೀಸ್ ಕಾನ್ಸ್ ಟೇಬಲ್ ಅಮಾನತು

ಹೆಚ್ಚಿನ ಮಾಹಿತಿಗಾಗಿ ತಮ್ಮ ಜಿಲ್ಲೆಯ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ, ವಿವರಗಳನ್ನು ತಿಳಿದುಕೊಳ್ಳಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಸಂತೋಷ್ ಸಪ್ಪಂಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!