Main News

ಬಿಜೆಪಿಗೆ ಹೊಸ ಪದಾಧಿಕಾರಿಗಳ ನೇಮಕ -ಸಿ.ಟಿ. ರವಿ ಔಟ್ : ನಡ್ಡಾ ತಂಡದಿಂದ ಶಾಕ್

ರವಿಗೆ ‘ರಾಜಯೋಗ’ : ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಾಧ್ಯತೆ

ನವದೆಹಲಿ : ಮುಂದಿನ ವಾರವೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷ‌ನಾಯಕನ ಆಯ್ಕೆ ಆಖೈರು ಮಾಡಲಿರುವ ಬಿಜೆಪಿ ಹೈಕಮಾಂಡ್ ಈಗಾಗಲೇ ರಾಜ್ಯ ಬಿಜೆಪಿ ನಾಯಕರ ಅಭಿಪ್ರಾಯ ಸಂಗ್ರಹಿಸಿದೆ

ಮುಂದಿನ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಜಾತಿ ಲೆಕ್ಕಾಚಾರದಲ್ಲಿ ಪ್ರತಿಪಕ್ಷ ಹಾಗು ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಸಿ ಟಿ ರವಿಗೆ ರಾಜ್ಯಾಧ್ಯಕ್ಷರಾಗುವ ‘ರಾಜಯೋಗ’ ಬರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ

ಕೇಂದ್ರ ಬಿಜೆಪಿ ಸಂಘಟನೆಯಲ್ಲೂ ಬಿಜೆಪಿ ವರಿಷ್ಠರು ಕೆಲವು ಬದಲಾವಣೆ ತಂದಿದ್ದಾರೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಹೊಸಬರನ್ನು ನೇಮಕ ಮಾಡಲಾಗಿದೆ.

ಚಿಕ್ಕಮಗಳೂರಿನ ಮಾಜಿ ಶಾಸಕ ಸಿ.ಟಿ. ರವಿ ಹೆಸರನ್ನು ಜೆ.ಪಿ. ನಡ್ಡಾ ಹಾಗೂ ತಂಡ ಕೈ ಬಿಟ್ಟಿದೆ. ಮಹಾರಾಷ್ಟ್ರ, ಗೋವಾ , ತಮಿಳುನಾಡು ಉಸ್ತುವಾರಿಯಾಗಿದ್ದ ಸಿ.ಟಿ. ರವಿ ಇನ್ನು ಮುಂದೆ ಆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ. ಇದಕ್ಕೆ ಅವರ ಅನಾರೋಗ್ಯ ಕಾರಣವೋ ಅಥವಾ ಚುನಾವಣೆಯಲ್ಲಿ ಸೋತದ್ದು ಕಾರಣವೋ ಅದು ಬಿಜೆಪಿಯ ವರಿಷ್ಟರಿಗಷ್ಟೇ ಗೊತ್ತು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್​ರನ್ನೇ ಮುಂದುವರಿಸಲಾಗಿದೆ ಬಿಜೆಪಿ ಇಡೀ ರಾಷ್ಟ್ರೀಯ ಸಂಘಟನೆಯಲ್ಲಿ ಬಿಎಲ್ ಸಂತೋಷ್ ಬಿಟ್ಟರೆ ಬೇರೆ ಇನ್ಯಾರೂ ಕನ್ನಡಿಗರನ್ನು ಸೇರ್ಪಡೆ ಮಾಡಲಾಗಿಲ್ಲ. ಅವರನ್ನು ರಾಷ್ಟ್ರೀಯ ಸಂಘಟನ್ ಮಹಾಮಂತ್ರಿಯನ್ನಾಗಿ ನೇಮಿಸಲಾಗಿದೆ. ತಮಿಳುನಾಡು : ಪಟಾಕಿ ಗೋದಾಮು ಸ್ಪೋಟ – 9ಮಂದಿ ದುರ್ಮರಣ

ರಾಷ್ಟ್ರೀಯ ಸಹ ಸಂಘಟನ ಮಹಾಮಂತ್ರಿಯನ್ನಾಗಿ ಶಿವ ಪ್ರಕಾಶ್​ರನ್ನು ನೇಮಿಸಲಾಗಿದೆ.

ಬಿಜೆಪಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಒಟ್ಟು 13 ಜನರನ್ನು ನೇಮಕ ಮಾಡಲಾಗಿದೆ ಅವರಲ್ಲಿ ಶಾಸಕರಾದ ವಸುಂಧರಾ ರಾಜೆ ಕೂಡ ಒಬ್ಬರು. ಇನ್ನುಳಿದವರು ಬೇರೆ ಬೇರೆ ರಾಜ್ಯದ ಶಾಸಕರು ಹಾಗೂ ಸಂಸದರಾಗಿದ್ದಾರೆ. ಈ ಪಟ್ಟಿಯಲ್ಲಿ ಒಟ್ಟು 4 ಜನರು ಮಹಿಳೆಯರೇ ಇರುವುದೂ ವಿಶೇಷವಾಗಿದೆ. ರಾಹುಲ್ ಗಾಂಧಿ ಮದುವೆ ಯಾವಾಗ ? ಸೋನಿಯಾ ಉತ್ತರ ಸೋಜಿಗ !

ಬಿಜೆಪಿಯ ರಾಷ್ಟ್ರೀಯ ಮಹಾಮಂತ್ರಿ ಸ್ಥಾನದಲ್ಲಿ, ಬಿಜೆಪಿ ಪ್ರಮುಖರಾದ ಅರುಣ್ ಸಿಂಗ್, ವಿನೋದ್ ತಾವಡೆ ಮುಂತಾದವರು ಇದ್ದಾರೆ. ಅದೇ ರೀತಿ 13 ಜನ ರಾಷ್ಟ್ರೀಯ ಸಚಿವರನ್ನು ನೇಮಿಸಲಾಗಿದೆ ಕೋಶಾಧ್ಯಕ್ಷರು ಹಾಗೂ ಸಹ ಕೋಶಾಧ್ಯಕ್ಷರನ್ನು ನೇಮಿಸಲಾಗಿದೆ.

Team Newsnap
Leave a Comment

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024