ಪುನೀತ್ ಅಕಾಲಿಕ ನಿಧನದಿಂದ ಅಪ್ಪು ಅಭಿಮಾನಿಗಳ ಸರಣಿ ಆತ್ಮಹತ್ಯೆ ಮುಂದುವರೆದಿದೆ. ಇದು ದೊಡ್ಡ ಮನೆ ಕುಟುಂಬಕ್ಕೆ ಭಾರೀ ನೋವು ತಂದಿದೆ. ಅಪ್ಪು ಪತ್ನಿ ಅಶ್ವಿನಿ ಮತ್ತು ಮಕ್ಕಳು ಸಾಕಷ್ಟು ನೊಂದುಕೊಂಡಿದ್ದಾರೆ ಎಂದು ರಾಘವೇಂದ್ರ ರಾಜ್ ಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ರಾಘವೇಂದ್ರ . ಅಪ್ಪುವಿನ ಅಗಲಿಕೆಯಿಂದ ಈಗಾಗಲೇ ನೋವಿನಲ್ಲಿದ್ದೀವಿ, ಅಭಿಮಾನಿಗಳು ಅನಾಹುತ ಮಾಡಿಕೊಂಡು ಮತ್ತೆ ನಮಗೆ ನೋವು ಕೊಡಬೇಡಿ. ಪತಿಯಲ್ಲದೆ ಪತ್ನಿ ಅಶ್ವಿನಿ, ಅಪ್ಪನಿಲ್ಲದೆ ಮಕ್ಕಳು ತುಂಬಾ ನೋವಿನಲ್ಲಿದ್ದಾರೆ. ಆದರೆ ಅಭಿಮಾನಿಗಳ ಆತ್ಮಹತ್ಯೆಗೆ ನನ್ನ ಯಜಮಾನ ಕಾರಣರಾಗುತ್ತಿದ್ದಾರೆ ಎಂಬ ಕೊರಗಿನಿಂದ ಅವರು ತುಂಬಾ ನೋವಿನಲ್ಲಿದ್ದಾರೆ ಎಂದು ಹೇಳಿದರು.
ರಾಜ್ಯದ ನಾನಾ ಕಡೆ ಅಭಿಮಾನಿಗಳ ಸಾವಿನ ಸುದ್ದಿಗಳನ್ನು ಟಿವಿಯಲ್ಲಿ ನೋಡುತ್ತಿದ್ದರೆ ನಮಗೆ ತುಂಬಾ ನೋವಾಗುತ್ತದೆ. ಇದರಿಂದ ನೊಂದುಕೊಂಡ ಅಪ್ಪು ಪತ್ನಿ ನಾನು ಹೊರಗಡೆ ಬರಲ್ಲ ಅಂತಿದ್ದಾರೆ. ಯಾರೂ ದಯವಿಟ್ಟು ಆತ್ಮಹತ್ಯೆಯಂತಹ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಎಂದು ರಾಘಣ್ಣ ಮನವಿ ಮಾಡಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು