January 29, 2026

Newsnap Kannada

The World at your finger tips!

congress , mandya , BJP

Congress leaders who day dream of power - CM ಅಧಿಕಾರದ ಹಗಲು ಕನಸು ಕಾಣುವ ಕಾಂಗ್ರೆಸ್ ನಾಯಕರು - ಸಿಎಂ

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನಕ್ಕೆ ಶೀಘ್ರವೇ ದಿನಾಂಕ ಪ್ರಕಟ ಬೊಮ್ಮಾಯಿ

Spread the love

ದಿ. ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಜೊತೆಗೆ ಜೇಮ್ಸ್ ಸಿನಿಮಾ ರಿಲೀಸ್ ಆಗಿದೆ. ಹೀಗಾಗಿ ಶೀಘ್ರವೇ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಈಗಾಗಲೇ ತೀರ್ಮಾನ ಆಗಿದೆ. ಪ್ರಶಸ್ತಿ ಪ್ರದಾನ ಮಾಡುವ ಸಂಬಂಧ ಡಾ.ರಾಜ್ ಕುಟುಂಬದ ಜತೆ ಚರ್ಚೆ ನಡೆಸುತ್ತೇನೆ ಎಂದರು.

ಈ ಸಂಬಂಧ ಒಂದು ಸಮಿತಿ ಕೂಡ ರಚಿಸಲಾಗುವುದು. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕ ನಿಗದಿ ಬಗ್ಗೆಯೂ ಆದಷ್ಟು ಬೇಗ ನಿರ್ಧಾರ ಮಾಡಲಾಗುವುದು ಎಂದರು.

error: Content is protected !!