ತ್ರಿವಿಧ ದಾಸೋಹ ಮಾಡಿದ ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಇನ್ನು ಮುಂದೆ ಪ್ರತಿ ವಷ೯ವೂ ಏಪ್ರಿಲ್ 1 ರಂದು ದಾಸೋಹ ದಿನವೆಂದೂ ಹಾಗೂ ಸರ್ಕಾರಿ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಬಿಸಿಯೂಟ ಯೋಜನೆ ಎಂದು ಹೆಸರಿಡಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ನಡೆದಾಡುವ ದೇವರು ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವ ಹಿನ್ನೆಲೆ ತುಮಕೂರಿನಲ್ಲಿರುವ ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಎಲ್ಲಾ ಸಮುದಾಯದವರನ್ನು ಸೇರಿಸಿ ತ್ರಿವಿಧ ದಾಸೋಹ ಮಾಡಿದವರು ಶ್ರೀಗಳು ಎಂದರು
ಇದೊಂದು ದೈವ ಶಕ್ತಿ, ಇದು ಮನುಷ್ಯರ ಶಕ್ತಿ ಅಲ್ಲ. ಶ್ರೀಗಳ ಧ್ಯೇಯ ಶ್ರದ್ಧೆ, ನಿಷ್ಠೆ, ಪರಿಶ್ರಮವನ್ನು ನಾವು ಪರಿಪಾಲನೆ ಮಾಡಬೇಕು. ಶ್ರೀಗಳಿಗೆ ಜಾತಿ ಭೇದ ಇರಲಿಲ್ಲ. ಸರ್ವೋದಯ ಪರಿಕಲ್ಪನೆ ಈ ಮಠದಲ್ಲಿ ನಿತ್ಯ ನಿರಂತರವಾಗಿ ನಡೆಯುತ್ತಿದೆ. ಸರ್ವೋದಯ ಮತ್ತು ಅಂತೋದ್ಯಯ ಈ ಮಠದಲ್ಲಿ ನಡೆಯುತ್ತಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ್ ಸ್ವಾಮೀಜಿ ಹೆಸರಿಡಲಾಗುವುದು ಎಂದು ಘೋಷಿಸಿದರು.
ನಾನು ಭಕ್ತನಾಗಿ ಇವತ್ತು ಕಾರ್ಯಕ್ರಮಕ್ಕೆ ಬಂದಿದ್ದೇನೆ. ಈ ನೆಲದಲ್ಲಿ ಪ್ರೇರಣೆಯ ಶಕ್ತಿ ಇದೆ. ಶಿವಕುಮಾರ್ ಶ್ರೀಗಳ ಪರಂಪರೆಯನ್ನು ಕಿರಿಯ ಶ್ರೀಗಳು ಮುಂದುವರಿಸುತ್ತಿದ್ದಾರೆ. 88 ವರ್ಷ ಈ ನಾಡಿಗೆ ಸಿದ್ದಗಂಗಾ ಶ್ರೀಗಳು ಸೇವೆ ಸಲ್ಲಿಸಿದ್ದಾರೆ. ಇಡೀ ದೇಶದಲ್ಲಿ ಯಾರೂ ಈ ಸೇವೆ ಮಾಡಿರಲಿಲ್ಲ. ಅದಕ್ಕಾಗಿಯೇ ಅವರನ್ನು ನಡೆದಾಡುವ ದೇವರು ಎನ್ನುತ್ತೇವೆ. ಅವರು ಹಚ್ಚಿದ ಹೊಲೆಯ ಕಿಚ್ಚು ಬಡವರ ಹಸಿವಿನ ಕಿಚ್ಚು ನಿಗಿಸುತ್ತಿದೆ. ಅನ್ನ, ಅಕ್ಷರ, ಆಶ್ರಯ ಎಂಬುದನ್ನು ಪಾಲಿಸಿದವರು ಸಿದ್ದಗಂಗಾ ಶ್ರೀಗಳು ಎಂದು ಸ್ಮರಿಸಿದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment