ಹಿಮಾಚಲ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದಾಗಲೇ ಆರೋಗ್ಯದ ಸಮಸ್ಯೆ ಉಲ್ಭಣಿಸಿ ಅಸ್ವಸ್ಥರಾಗಿದ್ದ, ಅರಕಲಗೂಡು ತಾಲೂಕಿನ ಅತ್ನಿ ಗ್ರಾಮದ ಯೋಧ ಬಿ.ಆರ್. ರಾಕೇಶ್ ಇಂದು ಛತ್ತಿಸ್ ಗಡ ಮಿಲಿಟರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅರಕಲಗೂಡು ಪಟ್ಟಣ ಪಂಚಾಯತಿ ನೌಕರರಾಗಿ ಕೆಲಸ ಮಾಡುತ್ತಿರುವ ಯೋಧನ ತಾಯಿ ಶಿವಮ್ಮ, ತಂದೆ ಬಾಣದಹಳ್ಳಿ ರಾಜು ಎಂಬುವವರ ಪುತ್ರನಾದ ಮೃತ ಯೋಧ ರಾಕೇಶ್, ತಾಲೂಕಿನ ಅತ್ನಿ ಗ್ರಾಮದಲ್ಲಿನ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಪಟ್ಟಣದ ಕೋಟೆ ಸರ್ಕಾರಿ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಿಕ್ಷಣ ಮತ್ತು ಕಂಚಿರಾಯ ಪ್ರೌಢಶಾಲೆ ಪ್ರೌಢ ಶಿಕ್ಷಣ ಮುಗಿಸಿ, ಪಿಯುಸಿ ನಂತರ ಹಾಸನದ ಎನ್ ಡಿಆರ್ ಕೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗಲೇ ಭಾರತೀಯ ಸೇನೆ ಸೇರಿದ್ದರು.
ಬೆಳಗಾವಿ ಸೈನಿಕ ಶಾಲೆಯಲ್ಲಿ 2018 ರಲ್ಲಿ ಮಿಲಿಟರಿ ಸೇನೆ ತರಬೇತಿ ಪಡೆದು ಹಿಮಾಚಲದಲ್ಲಿ ದೇಶ ಸೇವೆ ಸಲ್ಲಿಸುತ್ತಿದ್ದು ಅನಾರೋಗ್ಯದಿಂದಾಗಿ ಭಾನುವಾರ ಮೃತಪಟ್ಟಿದ್ದಾರೆ.
ಹುತಾತ್ಮ ಯೋಧ ಬಿ. ಆರ್. ರಾಕೇಶ್ ಪಾರ್ಥೀವ ಶರೀರವು ಇಂದು ಸಂಜೆ ಅಥವಾ ಸೋಮವಾರ ಬೆಳಗ್ಗೆ ತಾಲೂಕಿಗೆ ಬರುವ ನಿರೀಕ್ಷೆ ಇದೆ ಎಂದು ಯೋಧನ ಕುಟುಂಬದ ಮೂಲಗಳು ತಿಳಿಸಿವೆ.
ಮಗನನ್ನು ಕಳೆದುಕೊಂಡ ತಂದೆ-ತಾಯಿ ಹಾಗೂ ಸಂಬಂಧಿಕರ ರೋಧನ ಮುಗಿಲು ಮುಟ್ಟಿದೆ.
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ