ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೋನಾಗೆ ಬಲಿ

Team Newsnap
0 Min Read

ಸಾವು-ನೋವು ಹಂಚಿಕೊಂಡ ಸಂಗೀತ ನಿರ್ದೇಶಕ

ಸ್ಯಾಂಡಲ್​ವುಡ್​ನ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕಿರಣ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಅರ್ಜುನ್ ಜನ್ಯ, ನನ್ನ ಸೋದರ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಮ್ಮ ಇನ್​ಸ್ಟಾಗ್ರಾಮನಲ್ಲಿ ಬರೆದುಕೊಂಡಿದ್ದಾರೆ.

ಕೊರೊನಾದಿಂದಾಗಿ ನನ್ನ ಸಹೋದರನನ್ನು ಕಳೆದುಕೊಂಡೆ. ಕಿರಣ್ ನೀನಿಲ್ಲದ ನನ್ನ ನೋವನ್ನು ಹೇಗೆ ಹಂಚಿಕೊಳ್ಳಲಿ? ನನಗೆ ತಿಳಿಯುತ್ತಿಲ್ಲ. ನನ್ನ ಉಸಿರಿರೋವರೆಗೂ ನೀ ನನ್ನ ಉಸಿರಲ್ಲಿರುವೆ ಎಂದು ಬರೆದಿದ್ದಾರೆ.

Share This Article
Leave a comment