January 28, 2026

Newsnap Kannada

The World at your finger tips!

WhatsApp Image 2022 08 24 at 7.17.11 PM

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ನಗದು ರಹಿತ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಯೋಜನೆ ಜಾರಿ!

Spread the love

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ರಾಜ್ಯ ಸರ್ಕಾರವು ನಗದು ರಹಿತ ವೈದ್ಯಕೀಯ ಚಿಕಿತ್ಸೆಗೆ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ತರೀಕೆರೆ ಶಾಸಕ ಶ್ರೀನಿವಾಸ ಜಿ.ಹೆಚ್. ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ನಲ್ಲಿ ಪ್ರತ್ಯೇಕ ಕೋಶವನ್ನು (KASS CELL) ಸೃಷ್ಟಿಸಿ, ಅವಶ್ಯಕ ಮೂಲ ಸೌಲಭ್ಯಗಳ ಪೂರೈಕೆ ಮತ್ತು ತಂತ್ರಾಂಶ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಯೋಜನೆಯ ಜಾರಿ ಮತ್ತು ನೋಂದಣಿ:

  • ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಮಾದರಿಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.
  • ಎಲ್ಲಾ ಸಿಬ್ಬಂದಿಗಳ ಮಾಹಿತಿಯನ್ನು ಹ್ಯೂಮನ್ ರಿಸೋರ್ಸ್ ಮ್ಯಾನೇಜ್ಮೆಂಟ್ ಸಿಸ್ಟಂ (HRMS) ದತ್ತಾಂಶದಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.
  • DDO User Manual ಮತ್ತು Mobile User Manual ಅನ್ನು ಎಲ್ಲ DDO ಗಳಿಗೆ HRMS ತಂತ್ರಾಂಶದಲ್ಲಿ ಲಭ್ಯಪಡಿಸಲಾಗಿದೆ.
  • ಈ ಯೋಜನೆ ಅನುಷ್ಠಾನಗೊಳ್ಳಲು ಸರಿಯಾದ ತಂತ್ರಾಂಶದ ಅಭಿವೃದ್ಧಿ ಪ್ರಕ್ರಿಯೆ SAST ಹಂತದಲ್ಲಿ ಪರಿಶೀಲನೆಯಲ್ಲಿದೆ.

ಯೋಜನೆಯ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳ ನೋಂದಣಿ:

  • 2023ರ ಮಾರ್ಚ್ 9ರ ಸರ್ಕಾರದ ಆದೇಶ ಸಂಖ್ಯೆ: C.A.S.U.E 16 AMR 2020 (ಭಾಗ-5)
  • ಈ ಆದೇಶದಡಿಯಲ್ಲಿ, ಈಗಾಗಲೇ ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ SAST ನ ವಿವಿಧ ಯೋಜನೆಗಳ ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳ KASS ಯೋಜನೆಯಡಿ ಭಾವಿತ ನೋಂದಾವಣೆ (Deemed Empanelment) ಆಗಲಿದೆ.
  • ಹೊಸ ಖಾಸಗಿ ಆಸ್ಪತ್ರೆಗಳ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಸರ್ಕಾರಿ ನೌಕರರಿಗೆ ಆರೋಗ್ಯ ಸೇವೆ:

ಈ ಹೊಸ ಯೋಜನೆಯ ಮೂಲಕ ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳು ಹೆಚ್ಚಿನ ಆರೋಗ್ಯ ಸುರಕ್ಷತೆ ಪಡೆಯಲಿದ್ದು, ನಗದು ರಹಿತ ಚಿಕಿತ್ಸಾ ವ್ಯವಸ್ಥೆ ಅವರಿಗಾಗಿ ಸುಗಮಗೊಳ್ಳಲಿದೆ.

error: Content is protected !!