ಸ್ನೇಹಮಯಿ ಕೃಷ್ಣ ಅವರು ಸೋಮವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ, ತನಿಖೆಗೆ ಸಂಬಂಧಿಸಿದ ಮನವಿಯನ್ನು ಆಫೀಶಿಯಲ್ ರೀತಿಯಲ್ಲಿ ಸಲ್ಲಿಸಿದರು.
ಅಕ್ಟೋಬರ್ 10ರಂದು ವಾಟ್ಸಪ್ ಮೂಲಕ ಮನವಿ ಮಾಡಿದ ಅವರು, ಇದೀಗ ಕಚೇರಿಗೆ ಖುದ್ದಾಗಿ ಭೇಟಿ ನೀಡಿ, ಸಿದ್ದರಾಮಯ್ಯರನ್ನು ವಿಚಾರಣೆಗೊಳಪಡಿಸಲು ಮನವಿ ಮಾಡಿಕೊಂಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, “ಸಿದ್ದರಾಮಯ್ಯ ಸಾಕ್ಷಿಗಳನ್ನು ನಾಶ ಮಾಡುತ್ತಿದ್ದಾರೆ, ಪ್ರಚೋದನೆಮಯ ಭಾಷಣ ಮಾಡುತ್ತಿದ್ದಾರೆ, ಮತ್ತು ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಿ, ಬಂಧಿಸಬೇಕು,” ಎಂದು ವಿನಂತಿಸಿದ್ದಾರೆ.
ಇದೇ ವೇಳೆ ಅವರು, ಲೋಕಾಯುಕ್ತ ಕಚೇರಿಗೆ ಕೂಡಲೇ ಸಿಸಿಟಿವಿ ಅಳವಡಿಸುವಂತೆ ಮನವಿ ಸಲ್ಲಿಸಿದ್ದು, ಕೆಪಿಸಿಸಿ ವಕ್ತಾರರು ಪದೇ ಪದೇ ಕಚೇರಿಗೆ ಬರುತ್ತಿದ್ದಾರೆ ಎಂಬ ಮಾಹಿತಿ ಇದ್ದೇ, ಇದರ ಮೇಲೂ ಸೂಕ್ತ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.ಬಿಗ್ಬಾಸ್ ನಿರೂಪಣೆಗೆ ಸುದೀಪ್ ವಿದಾಯ: ಕಿಚ್ಚನ ಅಧಿಕೃತ ಘೋಷಣೆ!
ಮುಡಾ ಹಗರಣದ ಮೊದಲ ಹಂತದ ತನಿಖೆ ಮುಕ್ತಾಯಗೊಂಡಿದ್ದು, 1985 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಲೋಕಾಯುಕ್ತವು ಸೀಜ್ ಮಾಡಿದೆ. ಕಳೆದ ವಾರ ಇಬ್ಬರು ಆರೋಪಿಗಳನ್ನು 10 ಗಂಟೆಗಳ ಕಾಲ ವಿಚಾರಣೆ ಮಾಡಿದ್ದು, ಕೆಸರೆಯ ಸರ್ವೆ ನಂ. 426ರ ಮೂರುಕಾಲು ಎಕರೆ ಭೂಮಿಯ ವಾರಸುದಾರಿಕೆ ಕುರಿತ ವಿಚಾರಣೆಯೂ ನಡೆದಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು