ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಜಾಲದಲ್ಲಿ ತೊಡಗಿದ್ದ ಖದೀಮ ದಂಪತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ಭವ್ಯ(30) ಹಾಗೂ ಹಾಸನ ಜಿಲ್ಲೆಯ ಕುಮಾರ್ (35) ಬಂಧನಕ್ಕೊಳಗಾದ ಆರೋಪಿಗಳು.
ಚಿಕ್ಕಮಗಳೂರು ಮೂಲದ ಪುರೋಹಿತರೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಬರೋಬ್ಬರಿ 49 ಲಕ್ಷ ರೂಪಾಯಿ ಹಣವನ್ನು ವಸೂಲಿ ಮಾಡಿದ್ದರು ಎನ್ನಲಾಗಿದೆ.
ಜೊತೆಗೆ ಸಾಕಷ್ಟು ಜನರಿಗೆ ಈ ರೀತಿಯಲ್ಲಿ ಆರೋಪಿಗಳು ವಂಚಿಸಿದ್ದಾರೆ. ಈ ಕುರಿತು ಮಂಗಳೂರು ಗ್ರಾಮಾಂತರ ಪೋಲಿಸರು ತನಿಖೆ ಆರಂಭಿಸಿದ್ದಾರೆ.