ಮಂಡ್ಯದಲ್ಲಿ ಯುವಕನ ಬರ್ಬರ ಹತ್ಯೆ ಮಾಡಿದ ನಾಲ್ವರು ಆರೋಪಿಗಳ ಬಂಧನ

Team Newsnap
1 Min Read

ಡಿ 18 ರಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಡ್ಯದ ಕಲ್ಲಹಳ್ಳಿಯ ರೈಲ್ವೆ ಗೇಟ್ ಬಳಿ ಯಲಿಯೂರು ಗ್ರಾಮದ ರಕ್ಷಿತ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಹೊಳಲು ಗ್ರಾಮದ ಮಾದೇಶ, ಕಾಶಿ, ಮಂಜು, ಕಾರ್ತಿಕ್ ಬಂಧನ ಮಾಡಲಾಗಿದೆ.

ಕಾರ್ತಿಕ್ ಚಿಕ್ಕಪ್ಪನ ಮೇಲೆ ರಕ್ಷಿತ್ ಹಲ್ಲೆ ಮಾಡಿದ್ದನಂತೆ. ಇದರಿಂದ ಅಸಮಾಧಾನಗೊಂಡಿದ್ದ ಕಾರ್ತಿಕ್ ಹಾಗೂ ಸ್ನೇಹಿತರು, ಮಾತನಾಡುವುದಾಗಿ ರಕ್ಷಿತ್ ನನ್ನು ಕರೆಸಿಕೊಂಡು ಡ್ರಾಗನ್ ಇರಿದು ಹತ್ಯೆ ಮಾಡಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು, ಡಿವೈಎಸ್ಪಿ ಮಂಜುನಾಥ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Share This Article
Leave a comment