ವರ್ತೂರ್ ಪ್ರಕಾಶ್ ಅಪಹರಣದ ಪ್ರಕರಣದ ಪ್ರಮುಖ ಆರೋಪಿಯ ಬಂಧನ

Team Newsnap
0 Min Read

ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಪ್ರಕರಣದ ಪ್ರಮುಖ ಅರೋಪಿಯನ್ನು ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಅಪಸರಣ ರೂವಾರಿ ರೋಹಿತ್ ಬಂಧಿತ ಪ್ರಮುಖ ಆರೋಪಿ. ಈತ ಪ್ರಕರಣದ ಮತ್ತೊಬ್ಬ ಆರೋಪಿ ಕವಿರಾಜ್ ಬಂಧನದ ವೇಳೆ ತಮಿಳುನಾಡಿನ ಹೊಸೂರಿನಿಂದ ತಪ್ಪಿಸಿಕೊಂಡಿದ್ದ. ಕೋಲಾರ ಗ್ರಾಮಾಂತರ ಠಾಣಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಕಳೆದ ವರ್ಷ ನ. 26 ರಂದು ಕೋಲಾರ ದಿಂದ ಕಿಡ್ನಾಪ್ ಮಾಡಲಾಗಿತ್ತು. ಡಿಸೆಂಬರ್-2 ರಂದು ಪ್ರಕರಣ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಕೋಲಾರ ಪೊಲೀಸರು ಯಶಸ್ವಿಯಾಗಿದ್ದಾರೆ.

Share This Article
Leave a comment