ಮದ್ದೂರಿನ ವಿ. ವಿ ನಗರದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ನಂತರ ಉಸಿರುಕಟ್ಟಿಸಿ ಕೊಲೆ ಮಾಡಿ ಇಬ್ಬರು ಆರೋಪಗಳನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಮದ್ದೂರಿನ ವಿಶ್ವೇಶ್ವರಯ್ಯ ನಗರದ 9 ನೇ ಕ್ರಾಸ್ ನಲ್ಲಿರುವ ರಾಮೇಗೌಡರ ಬಾಡಿಗೆ ಮನೆಯಲ್ಲಿ ವಾಸವಿದ್ದ ಪೂರ್ಣಿಮಾ ಅವರನ್ನು ಫೆ.2 ರಂದು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಬೆಟ್ ಶೀಟ್ ನಿಂದ ಕುತ್ತಿಗೆ ಬಿಗಿದು ಅದರಿಂದಲೇ ಮೂಗು-ಬಾಯಿಯನ್ನು ಮುಚ್ಚಿ ಉಸಿರು ಕಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಮಳವಳ್ಳಿ ಡಿವೈಎಸ್ಪಿ ಲಕ್ಷ್ಮಿನಾರಾಯಣ್ ಪ್ರಸಾದ್ ಅವರ ಮಾರ್ಗ ದರ್ಶನದಲ್ಲಿ ಮೂರು ಪ್ರತ್ಯೇಕ ತಂಡಗಳನ್ನು ರಚನೆ ಮಾಡಲಾಗಿತ್ತು.
ವೃತ್ತ ನಿರೀಕ್ಷಕ ಕೆ.ಆರ್.ಪ್ರಸಾದ್ ಅವರ ನೇತೃತ್ವ ತಂಡವು ಫೆ.7 ರಂದು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿ ಬಂಧಿಸಿದ್ದಾರೆ.
ರಾಮನಗರ ತಾಲೂಕು ಕೂಟ್ಕಲ್ ಹೋಬಳಿ ರಾಯರದೊಡ್ಡಿ (ಸ್ವಂತ ಊರು ಹೊಂಬೇಗೌಡನದೊಡ್ಡಿ)
ಗ್ರಾಮದ ಎಚ್.ಆರ್.ಮನು ಆಲಿಯಾಸ್ ಮನು (23 ) ಹಾಗೂ ರಾಮನಗರ ತಾಲೂಕು ಕೂಟ್ಕಲ್ ಬಳಿಯ ಹೊಂಬೇಗೌಡನದೊಡ್ಡಿ ಗ್ರಾಮದ ಸಿ.ರಮೇಶ್ ಬಿನ್ ಲೇಟ್ ಚಿಕ್ಕೇಗೌಡ ಬಂಧಿತ ಆರೋಪಿಗಳು.
ಆರೋಪಿಗಳು ಕಿತ್ತುಕೊಂಡು ಹೋಗಿರುವ ವಸ್ತುಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿರುವ
ಮೋಟಾರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ




More Stories
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೃಹತ್ ಉದ್ಯೋಗ ಮೇಳ
ಅನಾರೋಗ್ಯ ದಿಂದ ಬಳಲುತ್ತಿರುವ ನಟಿ ಸಂಜನಾ ಮತ್ತೆ ಆಸ್ಪತ್ರೆಗೆ ದಾಖಲು
ವಿಸ್ಮಯ, ಅದ್ಭುತ, ವೈವಿಧ್ಯಮಯ ದೇಶ ಭಾರತ