ಬಂಧಿತ ಡಿಸಿ ಮಂಜುನಾಥ್, ಎಡಿಜಿಪಿ ಅಮೃತ್ ಪೌಲ್ ಸಸ್ಪೆಂಡ್

Team Newsnap
1 Min Read

ಒಂದೇ ದಿನ ರಾಜ್ಯದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಡಿಸಿ ಮಂಜುನಾಥ್ ಹಾಗೂ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಒಂದೇ ದಿನ ಭ್ರಷ್ಟಾಚಾರದ ಆರೋಪ ಮೇಲೆ IAS, IPS ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅರಗ ಜ್ಞಾನೇಂದ್ರ, IPS ಅಧಿಕಾರಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ಅಕ್ರಮದ ಆರೋಪ ಹಿನ್ನೆಲೆ ತನಿಖೆ ನಡೆಸಿದ್ದೇವೆ. ಸಿಐಡಿ ತಂಡ 2 ಗಂಟೆಯಲ್ಲಿ ಒಬ್ಬರನ್ನು ಅರೆಸ್ಟ್. ಮಾಡಿತ್ತು. ಕಲಬುರಗಿಗೆ ತೆರಳಿ ಬಂಧಿಸಿತ್ತು ಬ್ರೋಕರ್ ಹಾಗೂ ಹಣ ಕೊಟ್ಟವರನ್ನು ಬಂಧಿಸಲಾಗಿದೆ.

ಐದು ಲಕ್ಷ ರು ಲಂಚ ಪಡೆದ ಆರೋಪ : ಬೆಂಗಳೂರು ನಗರ ಡಿಸಿ ಮಂಜುನಾಥ್ ಬಂಧನ

ಪ್ರಕರಣದ ಬಗ್ಗೆ ಪಾರದರ್ಶಕವಾಗಿ ವಿಚಾರಣೆ ನಡೆದಿದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿರಲಿಲ್ಲ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ.

Share This Article
Leave a comment