February 22, 2026

Newsnap Kannada

The World at your finger tips!

film,Apple Box,production

Apple Box Studios: A new film production company from actress Ramya ಆಪಲ್ ಬಾಕ್ಸ್ ಸ್ಟುಡಿಯೋಸ್ : ನಟಿ ರಮ್ಯಾರಿಂದ ಹೊಸ ಚಿತ್ರ ನಿರ್ಮಾಣ ಸಂಸ್ಥೆ

ಆರ್ಯನ್ ಡ್ರಗ್ಸ್ ಸೇವಿಸಿಲ್ಲ , ಬಂಧಿಸಲಾಗಿದೆ- ರೈತರನ್ನು ಕೊಂದ ಸಚಿವರ ಮಗನನ್ನು ಬಂಧಿಸಿಲ್ಲ – ರಮ್ಯಾ

Spread the love

ಆರ್ಯನ್ ಖಾನ್ ಬಳಿ ಡ್ರಗ್ಸ್ ಇರಲಿಲ್ಲ, ಡ್ರಗ್ಸ್ ಸೇವಿಸಿದ ಬಗ್ಗೆ ದಾಖಲೆ ಇಲ್ಲ. ಆದರೂ ಬಂಧಿಸಲಾಗಿದೆ. ಕೇಂದ್ರ ಸಚಿವರ ಮಗ ರೈತರನ್ನು ಕೊಂದರೂ ಇನ್ನೂ ಬಂಧಿಸಿಲ್ಲ ಯಾಕೆ ಎಂದು ನಟಿ , ಮಾಜಿ ಸಂಸದೆ ರಮ್ಯಾ ಪ್ರಶ್ನೆ ಮಾಡಿದ್ದಾರೆ

ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿರುವ ರಮ್ಯಾ ಬಿಜೆಪಿ ಸಚಿವರ ಮಗ 4 ರೈತರನ್ನು ಕೊಂದಿದ್ದಾರೆ. ಅವರ ಬಂಧನ ಯಾಕಿಲ್ಲ? ಅಲ್ಲದೆ ಮೃತ ರೈತರ ಕುಟುಂಬದವರನ್ನು ಭೇಟಿ ಮಾಡಲು ಹೊರಟಾಗ ಯಾವುದೇ ನೋಟಿಸ್ ಅಥವಾ ಮುನ್ಸೂಚನೆ ಇಲ್ಲದೆ ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆದಿರಿ. ಇದು ಹೊಸ ಭಾರತ. ಅಧಿಕಾರದಲ್ಲಿರುವ ಹುಚ್ಚಾಟಿಕೆಯಿಂದ ದೇಶ ನಡೆಯುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಆರ್ಯನ್ ಖಾನ್ ಬಳಿ ಮಾದಕ ವಸ್ತು ಇದೆ, ಡ್ರಗ್ಸ್ ಸೇವಿಸಿದ್ದಾನೆ ಎಂದು ಎನ್‍ಸಿಬಿ ಎಲ್ಲೂ ಹೇಳಿಲ್ಲ. ಆದರೂ ಕಸ್ಟಡಿಗೆ ಪಡೆಯಲಾಗಿದೆ ಎಂದಿದ್ದಾರೆ.

ಎನ್‍ಸಿಬಿ ಆಯೋಜಕರಿಗೆ ಸುಲಭವಾಗಿ ವಾರೆಂಟ್ ಜಾರಿ ಮಾಡಬಹುದು, ವಿಚಾರಣೆಗೆ ಕರೆಯಬಹುದು. ಆದರೂ ಈ ವರೆಗೆ ಅದನ್ನು ಯಾಕೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ನ್ಯಾಯಾಲಯದಲ್ಲಿ ವಾಟ್ಸಪ್ ಚಾಟ್‍ಗಳನ್ನು ಪುರಾವೆಯಾಗಿ ಪರಿಗಣಿಸುವುದಿಲ್ಲ. ವಿಚಾರಣೆ ವೇಳೆ ಆರ್ಯನ್ ತಪ್ಪೊಪ್ಪಿಕೊಂಡಿದ್ದಾನೆ ಎಂದು ಹೇಳುತ್ತಾರೆ. ಇದು ಸತ್ಯವಲ್ಲ, ಏಕೆಂದರೆ ಆರ್ಯನ್ ಒಪ್ಪಿಕೊಂಡಿರುವ ಕುರಿತು ಎಲ್ಲೂ ಬಹಿರಂಗವಾಗಿ ಹೇಳಿಲ್ಲ. ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಎನ್‍ಸಿಬಿ ಹೇಳುತ್ತಿದೆ. ಇದು ನಿಜವೇ ಆಗಿದ್ದರೆ ಎನ್‍ಸಿಬಿ ಕಾನೂನನ್ನು ಉಲ್ಲಂಘಿಸಿದಂತೆ.

ವಿಚಾರಣೆ ವೇಳೆ ದೀಪಿಕಾ ಪಡುಕೋಣೆ ಸಾಕಷ್ಟು ಬಾರಿ ಅತ್ತರು, ಆರ್ಯನ್ ಖಾನ್ ಅತ್ತಿದ್ದಾರೆ ಎಂಬ ಗಾಸಿಪ್ ಹರಡೋದು ಅವರಿಗೆ ಇಷ್ಟ ಎನಿಸುತ್ತದೆ. ವಿಚಾರಣೆ ವೇಳೆ ಅಧಿಕಾರಿಗಳನ್ನು ಹೊರತುಪಡಿಸಿ ಯಾರೂ ಇರುವುದಿಲ್ಲ. ಆದಾಗ್ಯೂ ಇದು ಮಾಧ್ಯಮಗಳಿಗೆ ಹೇಗೆ ಸಿಗುತ್ತದೆ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

error: Content is protected !!