ಗುಡಿಯನೆಂದು ಕಟ್ಟದಿರು,
ನೆಲೆಯನೆಂದು ನಿಲ್ಲದಿರು…….
ಒಮ್ಮೆ ಬೆಳಕಾದೆ ನಾನು,
ದೇಹ ಗಾಳಿಯಾಯಿತು,
ಮನಸ್ಸು ವಿಶಾಲವಾಯಿತು,
ವಿಶ್ವ ಪರ್ಯಟನೆ ಮಾಡಬೇಕೆಂಬ ಆಸೆಯಾಯಿತು……
ಅಗೋ ಅಲ್ಲಿ ಮಿನುಗುತ್ತಿವೆ ನಕ್ಷತ್ರಗಳು,
ಉರಿಯುತ್ತಿವೆ ಧೂಮಕೇತುಗಳು,
ಕೆಂಪಡರಿದ ಸೂರ್ಯ,
ತಂಪಡರಿದ ಚಂದ್ರ,
ಓ ಮೇಲೆ ನೋಡು ನೀಲಾಕಾಶ ,
ಕೆಳಗೆ ನೋಡು ಭೂಲೋಕ,
ಕಣ್ಣಿನ ನೋಟಕ್ಕೂ ಸಿಗದಷ್ಟು ನೀರು,
ಕಣ್ಣಂಚಿನಲ್ಲಿ ಕಾಣುವಷ್ಟು ಕಾಡು,
ಅಲ್ಲಲ್ಲಿ ಪ್ರಾಣಿ ಪಕ್ಷಿಗಳು,
ಎಲ್ಲೆಲ್ಲೂ ನರಮಾನವರು,
ಒಂದು ಕಡೆ ಹಚ್ಚ ಹಸಿರು,
ಇನ್ನೊಂದು ಕಡೆ ಮರುಭೂಮಿ,
ಅಗೋ ಅಲ್ಲಿ ಅಗ್ನಿ ಪರ್ವತ,
ಇಗೋ ಇಲ್ಲಿ ಹಿಮಪರ್ವತ,
ಎಲ್ಲೆಲ್ಲೂ ಸುಂಟರಗಾಳಿ,
ಮತ್ತೆಲ್ಲೊ ಪ್ರಶಾಂತ ಗಾಳಿ,
ಅಲ್ಲಿ ನಡೆಯುತ್ತಿದೆ ನೋಡು ರಕ್ತಪಾತ,
ಇಲ್ಲಿ ಕೇಳುತ್ತಿದೆ ನೋಡು ಶಾಂತಿ ಮಂತ್ರ,
ಅಲ್ಲೆಲ್ಲೋ ಗುಂಡಿನ ಸದ್ದು,
ಇನ್ನೆಲ್ಲೂ ನೀರವ ಮೌನ,
ಸ್ವಲ್ಪ ಹೊತ್ತು ಬೆಳಕೋ ಬೆಳಕು,
ಮತ್ತಷ್ಟು ಹೊತ್ತು ಕಾರ್ಗತ್ತಲು,
ಒಮ್ಮೆ ಮೈ ಕೊರೆಯುವ ಚಳಿ,
ಮತ್ತೊಮ್ಮೆ ಬೆವರು ಸುರಿಸುವ ಬಿಸಿಲು,
ಭೋರ್ಗರೆಯುವ ಮಳೆ ,
ರೊಪ್ಪನೆ ಬೀಸುವ ಗಾಳಿ,
ಮುಷ್ಟಿಯಷ್ಟಿದೆ ಈ ಲೋಕ,
ಹಿಡಿಯ ಹೋದರೆ ಸಮಷ್ಟಿ,
ಮುಗಿಯಿತು ತ್ರಿಲೋಕ ಸಂಚಾರ,
ಆಯಿತು ಬದುಕು ಸಾಕ್ಷಾತ್ಕಾರ.
ಆದರೂ,…….
ಇನ್ನೊಂದಾಸೆ,
ಒಂದೇ ಒಂದಾಸೆ,
ನಿಮ್ಮ ಹೃದಯದಾಳದಲಿ ಅಣುವಾಗುವಾಸೆ,,
ನಿಮ್ಮ ಮನದಾಳದಲಿ ಕಣವಾಗುವಾಸೆ,
ನಿಮ್ಮ ನೆನಪಿನಾಳದಲಿ ಶಾಶ್ವತವಾಗಿ ನೆಲೆಯಾಗುವಾಸೆ,
ಒಪ್ಪಿಕೊಳ್ಳಿ ,ಅಪ್ಪಿಕೊಳ್ಳಿ ದಾರಿ ತಪ್ಪಿದೀ ಜೀವಿಯನ್ನ……
ಬರುವವರಿಗೆ ಸ್ವಾಗತ,
ಹೋಗುವವರಿಗೆ ವಂದನೆಗಳು,
ಮೆಚ್ಚುವವರಿಗೆ ಧನ್ಯವಾದಗಳು,
ಟೀಕಿಸುವವರಿಗೆ ನಮಸ್ಕಾರಗಳು,
ಅಭಿಮಾನಿಸುವವರಿಗೆ ಕೃತಜ್ಞತೆಗಳು,
ಅಸೂಯೆಪಡುವವರಿಗೆ ಸಹಾನುಭೂತಿಗಳು,
ಪ್ರೀತಿಸುವವರಿಗೆ ನಗು,
ದ್ವೇಷಿಸುವವರಿಗೆ ನಿರ್ಲಕ್ಷ್ಯ,
ಸಹಾಯ ಮಾಡುವವರಿಗೆ ಸಲಾಂ,
ತೊಂದರೆ ಕೊಡುವವರಿಗೆ ಗುಡ್ ಬೈ,
ಆತ್ಮೀಯರಿಗೊಂದಷ್ಟು ಅಪ್ಪುಗೆ,
ಪರಿಚಿತರಿಗೊಂದಷ್ಟು ಸಲುಗೆ,
ಪ್ರೋತ್ಸಾಹಿಸುವವರಿಗೆ ನಮನಗಳು,
ಕಾಲೆಳೆಯುವವರಿಗೆ ತಿರಸ್ಕಾರಗಳು,
ಜೊತೆಯಾಗುವವರಿಗೆ
ಯಶಸ್ಸಾಗಲಿ,
ದೂರಾಗುವವರಿಗೆ ಒಳ್ಳೆಯದಾಗಲಿ,
ಗೆದ್ದವರಿಗೆ ಅಭಿನಂದನೆಗಳು,
ಸೋತವರಿಗೆ ಹಿತ ನುಡಿಗಳು,
ಹೀಗೆ, ಎಲ್ಲಾ ಭಾವನೆಗಳೊಂದಿಗೆ, ಸಾಗುತ್ತಲೇ ಇದೆ ಬದುಕು,
ನನ್ನದು, ನಿಮ್ಮದು, ಎಲ್ಲರದೂ,
ಬದುಕಿನೊಂದಿಗೆ ಸರಸವಾಡುತ್ತಾ,
ವಿಧಿಯೊಂದಿಗೆ ಚೆಲ್ಲಾಟವಾಡುತ್ತಾ,
ಬರುವುದನ್ನು ಸ್ವೀಕರಿಸುತ್ತಾ,
ಹೋಗುವುದನ್ನು ಬೀಳ್ಕೊಡುತ್ತಾ,
ನಗುತ್ತಾ, ಅಳುತ್ತಾ,….…
ಸಾಗುತ್ತಲೇ ಇರಲಿ ಜೀವನ…..
ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ....
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment