ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಮುಂಬರುವ ಆಪತ್ತು ವಿಪತ್ತುಗಳ ಬಗ್ಗೆ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಭವಿಷ್ಯ ನುಡಿದಿದ್ದಾರೆ.
ಹಾಸನಾಂಬೆಯ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಹ್ಮಾಂಡ ಗುರುಗಳು, “ಇಂದಿರಾ ಗಾಂಧಿಯ ಹತ್ಯೆಯ ರೀತಿಯಲ್ಲೇ ಮೋದಿಗೂ ಅಪಾಯ ಕಾದಿದೆ.” ಮೋದಿ ತಮ್ಮ ಸುತ್ತಮುತ್ತಲಿನವರ ಜೊತೆಗೆ ಎಚ್ಚರಿಕೆಯಿಂದ ಇರುವುದು ಸೂಕ್ತ. ಅವರು ತಮ್ಮ ತಾಯಿ, ಮಡದಿ ಜೊತೆಗಿದ್ದರೆ ಕ್ಷೇಮ. ತಿರುಪತಿ ದೇವಾಲಯದಲ್ಲೂ ಬದಲಾವಣೆಯಾಗಲಿದೆ”ಎಂದು ಬ್ರಹ್ಮಾಂಡ ಭವಿಷ್ಯ ನುಡಿದಿದ್ದಾರೆ.
“ಮುಖ್ಯಮಂತ್ರಿ ಹುದ್ದೆ, ಯಡಿಯೂರಪ್ಪನವರಿಗೆ ಈ ವರ್ಷಾಂತ್ಯದ ವರೆಗೆ ಮಾತ್ರ. ಅವರ ಜಾಗದಲ್ಲಿ ಇನ್ನೊಬ್ಬರು ಕೂರಲಿದ್ದಾರೆ. ಬೆಂಗಳೂರಿನಲ್ಲಿ ಜಲಕಂಟಕ ಮುಂದುವರಿಯಲಿದೆ. ಅಖಂಡ ಆಂಧ್ರ ಒಡೆದು ಹೋದಂತೆ, ಕರ್ನಾಟಕ ಎರಡು ಭಾಗವಾಗಲಿದೆ. ಒಂದಕ್ಕೆ ಬೆಳಗಾವಿ, ಇನ್ನೊಂದಕ್ಕೆ ಬೆಂಗಳೂರು ಪ್ರಮುಖ ಕೇಂದ್ರವಾಗಲಿದೆ” ಎಂದು ಭವಿಷ್ಯ ನುಡಿದಿದ್ದಾರೆ.
ಸ್ತ್ರೀಯರು ಜಗತ್ತನ್ನು ಆಳಲಿದ್ದಾರೆ, ಮುಂದಿನ ಮೂರು ವರ್ಷ ಭರತಖಂಡ ಸೇರಿದಂತೆ ಜಗತ್ತು ಕಷ್ಟವನ್ನು ಎದುರಿಸಬೇಕಿದೆ. ಭಾರತದ ರಾಜಕೀಯ ಕ್ಷೇತ್ರದಲ್ಲಿ ಹತ್ತು ಹಲವು ಬದಲಾವಣೆಯಾಗಲಿವೆ. ಮಹಿಳೆಯರು ಪಾತ್ರ ನಿರ್ಣಾಯಕವಾಗಲಿದೆ”ಎಂದು ಹೇಳಿದ್ದಾರೆ.
“ಮುಂದಿನ ಅವಧಿಯಲ್ಲೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಪ್ರಧಾನಿಯಾಗಿ ಮೋದಿಯವರು ಮುಂದುವರಿಯುವ ಸಾಧ್ಯತೆ ಕಮ್ಮಿ. ಪಕ್ಷದಲ್ಲೇ ಒಂದು ತಂಡ ಮೋದಿಗೆ ವಿರುದ್ದವಾಗಿ ಮಸಲತ್ತು ಮಾಡುತ್ತಿದೆ. ಅದಕ್ಕೇ ಅವರು ಇತ್ತೀಚಿನ ದಿನಗಳಲ್ಲಿ ವೈರಾಗ್ಯದ ಕಡೆಗೆ ಆಸಕ್ತಿ ತೋರಿಸುತ್ತಿದ್ದಾರೆ ಎಂದು ಬ್ರಹ್ಮಾಂಡ ಹೇಳಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment