ಮೈಸೂರು : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮ ಯಶಸ್ವಿಗೊಳಿಸಲು ಸೋಮವಾರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ .ಸಿ ಮಹದೇವಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಭಕ್ತರಿಗೆ ಅನುಕೂಲವಾಗುವ ಮಾದರಿಯಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ವ್ಯವಸ್ಥೆಗೊಳಿಸಬೇಕು.
ಪ್ರತಿಯೊಬ್ಬ ಪ್ರಜೆಗೂ ಧಾರ್ಮಿಕ ಸ್ವಾತಂತ್ರ್ಯವಿದೆ ಹೀಗಾಗಿ ಭಕ್ತರಿಗೆ ಯಾವುದೇ ಅಡಚಣೆ ಉಂಟಾಗದಂತೆ ಕೆಲಸ ನಿರ್ವಹಿಸಿ ಎಂದು ಸಚಿವರು ತಿಳಿಸಿದರು.
ಚಾಮುಂಡಿ ಬೆಟ್ಟ ಚಾಮುಂಡೇಶ್ವರಿ ದೇವಸ್ಧಾನದಲ್ಲಿ 2023 ನೇ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಅಂಗವಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಈ ಹಿಂದೆ ನಡೆದಿರುವ ಕ್ರಮಗಳನ್ನು ಅನುಸರಿ, ಯಾವುದು ಲೋಪವಿರುವ ವ್ಯವಸ್ಥೆಗಳನ್ನು ಸರಿ ಪಡಿಸಿ ಜನರಿಗೆ ಅನುಕೂಲ ವಾಗುವ ಎಲ್ಲಾ ವ್ಯವಸ್ಥೆಗಳನ್ನು ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜೂ. 15ಕ್ಕೆ ಸಿಇಟಿ ಪರೀಕ್ಷಾ ಫಲಿತಾಂಶ ಪ್ರಕಟ
ಈ ವೇಳೆ ಸಭೆಯಲ್ಲಿ ಎನ್.ಆರ್ ಕ್ಷೇತದ ಶಾಸಕರಾದ ತನ್ವಿರ್ ಸೇಠ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಜಿಲ್ಲಾಧಿಕಾರಿ ಡಾ ಕೆವಿ ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬನೋತ್, ಎಸ್ಪಿ ಸೀಮಾ ಲಾಟ್ಕರ್ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು