Karnataka

ಆಶ್ಲೇಷ ಮಳೆಯ ಅಬ್ಬರ : ಮಂಡ್ಯ ಸೇರಿದಂತೆ ಜಿಲ್ಲೆಗಳಲ್ಲಿ ಭಾರಿ ಅವಾಂತರ

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಆಶ್ಲೇಷ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟಕ್ಕೆ ಮಂಡ್ಯ, ತುಮಕೂರು, ಚಾಮರಾಜನಗರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಅವಾಂತರಗಳೇ ಸೃಷ್ಟಿಯಾಗಿವೆ. ಅಬ್ಬರಿಸಿದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಊರುಗಳೇ ಮುಳುಗಡೆಯಾಗಿಬಿಟ್ಟಿವೆ.

ರಾಜ್ಯದಲ್ಲಿ ವರುಣ ಮತ್ತೆ ಅಬ್ಬರಿಸೋಕೆ ಶುರು ಮಾಡಿದ್ದಾನೆ. ಕರಾವಳಿ, ಮಲೆನಾಡು ಜೊತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ನದಿಗಳು ತುಂಬಿ ಹರಿಯುತ್ತಿವೆ. ಹಳ್ಳಕೊಳ್ಳಗಳು ಭೋರ್ಗರೆದು ಹರಿಯುತ್ತಿವೆ. ಕೆರೆಗಳು ಕೋಡಿ ಬಿದ್ದು ಹರಿಯುತ್ತಿವೆ. ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗುತ್ತಿವೆ. ಗುಡ್ಡಗಾಡಿನ ಮಂದಿಗೆ ಭೂಕುಸಿತದ ಭೂತ ಮತ್ತೆ ಬೆನ್ನುಬಿದ್ದಿದೆ.ಇದನ್ನು ಓದಿ –18ನೇ ವಯಸ್ಸಿನಲ್ಲಿ ಮೋಹಕತಾರೆ ರಮ್ಯಾ ಹೇಗಿದ್ದರು ನೋಡಿ

ರಣ ಭೀಕರ ಮಳೆಗೆ ಮಂಡ್ಯ ಜಿಲ್ಲೆಯಲ್ಲೂ ನೆರೆಪರಿಸ್ಥಿತಿ ಎದುರಾಗಿದೆ. ಅಲ್ಲದೇ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಮದ್ದೂರು ಪಟ್ಟಣಕ್ಕೆ‌ ಜಲ ದಿಗ್ಬಂಧನವಾಗಿದೆ. ಮದ್ದೂರಿನ ಕೊಲ್ಲಿ ಸರ್ಕಲ್ ಬಡಾವಣೆಗೆ ನೀರು ನುಗ್ಗಿದ್ದು, ಮನೆ, ಅಂಗಡಿ ಮುಂಗಟ್ಟುಗಳೆಲ್ಲಾ ಜಲಾವೃತವಾಗಿವೆ. ಮತ್ತೊಂದೆಡೆ ಮಂಡ್ಯ ಜಿಲ್ಲೆಯ ಸೊಳ್ಳೆಪುರ- ಕಿಕ್ಕೇರಿ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಹಳ್ಳತುಂಬಿ ಹರಿಯುತ್ತಿರುವುದರಿಂದ ಸೇತುವೆ ಮುಳುಗಡೆಯಾಗಿದ್ದು, ಜನರು ಓಡಾಡಲು ಹರಸಾಹಸಪಡುವಂತಾಗಿದೆ.

ತುಮಕೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಜೋರಾಗಿದ್ದು, ಜಯಮಂಗಲಿ ಹಾಗೂ ಸುವರ್ಣಮುಖಿ ನದಿ ಮೈ ತುಂಬಿ ಹರಿಯುತ್ತಿವೆ. ಪರಿಣಾಮ ಕೊರಟಗೆರೆ ತಾಲೂಕಿನ ಹಲವು ಗ್ರಾಮಗಳಿಗೆ ನದಿ ನೀರು ನುಗ್ಗಿ ಗ್ರಾಮದ ಜನರು ರಾತ್ರಿಯೆಲ್ಲಾ ಜಾಗರಣೆ ಮಾಡುವಂತಾಗಿದೆ. ಭಾರೀ ಮಳೆಯಿಂದ ತುಮಕೂರಿನ ಹೊಸಳಯ್ಯನ ತೋಟ ಮತ್ತು ಭಾರತಿನಗರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕ್ಕ – ತಂಗಿ ಎಂಬ ಕೆರೆ ನೀರು ಬಂದು ಮನೆಗಳೆಲ್ಲಾ ಜಲಾವೃತವಾಗಿದೆ. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಜ್ಯೋತಿ ಗಣೇಶ್‌ಗೆ ಸ್ಥಳೀಯರು ಘೇರಾವ್​ ಹಾಕಿದರು.

ಚಾಮರಾಜನಗರದಲ್ಲಿ ನಿರಂತರ ಮಳೆಗೆ ಹನೂರು ತಾಲೂಕು ಕೊರಮನಕತ್ತರಿ ಬಳಿ ಜೆ. ವಿಲೇಜ್ ಹಳ್ಳದ ಸೇತುವೆ ಮುಳುಗಡೆಯಾಗಿದೆ. ಪರಿಣಾಮ ಕೊಳ್ಳೇಗಾಲ-ಸತ್ಯಮಂಗಲ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಲವು ದಿನಗಳಿಂದ ಸೇತುವೆ ಶಿಥಿಲಗೊಂಡಿದೆ. ಆದ್ರೆ ಸೇತುವೆ ದುರಸ್ಥಿಗೆ ಯಾವ ಅಧಿಕಾರಿಗಳು ಮುಂದಾಗುತ್ತಿಲ್ಲ ಅಂತಾ ಸ್ಥಳೀಯರು
ಆಕ್ರೋಶ ಹೊರಹಾಕುತ್ತಿದ್ದಾರೆ.

Team Newsnap
Leave a Comment

Recent Posts

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024