ರಾಜ್ಯದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರಿಗೂ ಕರೋನಾ ಸೋಂಕು ಧೃಡಪಟ್ಟಿದೆ. ಅವರೀಗ ತಮ್ಮ ಮನೆಯಲ್ಲೇ ಪ್ರತ್ಯೇಕವಾಗಿ ವಾಸವಾಗಿದ್ದಾರೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಡಿಸಿಎಂ, ‘ಸೋಮವಾರ ವಿಧಾನಮಂಡಲ ಅಧಿವೇಶನ ಇದ್ದ ಕಾರಣ, ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ಸೋಂಕು ಧೃಡವಾಗಿದೆ. ಆದರೆ ನನಗೆ ರೋಗದ ಲಕ್ಷಣಗಳೇನೂ ಕಾಣಿಸಿಕೊಂಡಿಲ್ಲ. ನಾನು ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚಿಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕೋರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.