ಗಾಡಿ ಟೋಯಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಕಲ್ಲೇಟು ಹೊಡೆದ ವಿಕಲಚೇತನ ಮಹಿಳೆಯ ಮೇಲೆ ಹಲ್ಲೆ ಮಾಡಿ ದರ್ಪ ತೋರಿದ ಎಎಸ್ಐ ನಾರಾಯಣ್ ಅಮಾನತು ಮಾಡಲಾಗಿದೆ.
ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿ ಹಲ್ಲೆ ಸಂಬಂಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳದೆ ಹಲ್ಲೆ ಮಾಡಿರೋದು ತಪ್ಪು. ಹಾಗಾಗಿ ಸದ್ಯಕ್ಕೆ ಹಲಸೂರು ಗೇಟ್ನಿಂದ ಎಎಸ್ಐರನ್ನು ಸ್ಥಳದಿಂದ ಮ್ಯಾನೆಜ್ಮೆಂಟ್ ಸೆಂಟರ್ಗೆ ನಿಯೋಜಿಸಲಾಗಿದೆ.
ಈ ಘಟನೆ ಬಗ್ಗೆ ಇಲಾಖೆ ತನಿಖೆಗೆ ಕೂಡ ಸೂಚನೆ ನೀಡಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಟೋಯಿಂಗ್ ವಾಹನದಲ್ಲಿ ಕೂತಿದ್ದ ಹಲಸೂರ್ ಗೇಟ್ ಸಂಚಾರಿ ಟೋಯಿಂಗ್ ಎಎಸ್ಐ ನಾರಾಯಣ್ ಮೇಲೆ ವಿಕಲಚೇತನ ಮಹಿಳೆ ಕಲ್ಲೇಟು ನೀಡಿದ್ದಾರೆ.
ಎಎಸ್ಐ ಮುಖಕ್ಕೆ ಕಲ್ಲು ತಾಗಿ ರಕ್ತ ಬಂದಿದೆ. ಇದರಿಂದ ಸಿಟ್ಟಿಗೆದ್ದ ಎಎಸ್ಐ, ಕೂಡಲೇ ವಾಹನದಿಂದ ಕೆಳಗಿಳಿದು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಬೂಟಿನಿಂದ ಒದ್ದು ಹಲ್ಲೆ ಮಾಡಿದ್ದನ್ನು ಸ್ಮರಿಸಬಹುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ