Main News

ಏಷ್ಯಾಕಪ್​ – ಬಲಿಷ್ಠ ಟೀಮ್ ಇಂಡಿಯಾ ತಂಡ ಪ್ರಕಟ

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ ಟಿ20 ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ.

15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ ಏಷ್ಯಾಕಪ್​ ಮೂಲಕ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಗಾಯದ ಕಾರಣ ಹಲವು ಸರಣಿ ತಪ್ಪಿಸಿಕೊಂಡಿದ್ದ ಭಾರತ ತಂಡದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಕೂಡ ತಂಡಕ್ಕೆ ಮರಳಿದ್ದಾರೆ.

ಟೀಮ್ ಇಂಡಿಯಾ ವೇಗಿಗಳಾದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಇನ್ನುಳಿದಂತೆ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯಲ್ಲಿ ಕಾಣಿಸಿಕೊಂಡ ಪ್ರಮುಖ ಆಟಗಾರರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅದರಂತೆ ಏಷ್ಯಾಕಪ್​ಗಾಗಿ ಭಾರತ ತಂಡ ಈ ಕೆಳಗಿನಂತಿದೆ.

ಏಷ್ಯಾಕಪ್​ಗಾಗಿ ಟೀಮ್ ಇಂಡಿಯಾ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಮೀಸಲು ಆಟಗಾರರು: ಅಕ್ಷರ್ ಪಟೇಲ್, ಶ್ರೇಯರ್ ಅಯ್ಯರ್ ಹಾಗೂ ದೀಪಕ್ ಚಹರ್.

ಏಷ್ಯಾ ಕಪ್ ತಂಡಗಳ ಗ್ರೂಪ್ :

  1. ಗ್ರೂಪ್ ಎ ತಂಡಗಳು- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
  2. ಗ್ರೂಪ್ ಬಿ ತಂಡಗಳು- ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ

ಸಂಪೂರ್ಣ ವೇಳಾಪಟ್ಟಿ ಹೀಗಿದೆ:

  1. ಆಗಸ್ಟ್ 27 – ಶ್ರೀಲಂಕಾ vs ಅಫ್ಘಾನಿಸ್ತಾನ- ದುಬೈ
  2. ಆಗಸ್ಟ್ 28 – ಭಾರತ vs ಪಾಕಿಸ್ತಾನ- ದುಬೈ
  3. ಆಗಸ್ಟ್ 30 – ಬಾಂಗ್ಲಾದೇಶ vs ಅಫ್ಘಾನಿಸ್ತಾನ- ಶಾರ್ಜಾ
  4. ಆಗಸ್ಟ್ 31 – ಭಾರತ vs ಕ್ವಾಲಿಫೈಯರ್ ಟೀಮ್- ದುಬೈ
  5. ಸೆಪ್ಟೆಂಬರ್ 1 – ಶ್ರೀಲಂಕಾ vs ಬಾಂಗ್ಲಾದೇಶ- ದುಬೈ
  6. ಸೆಪ್ಟೆಂಬರ್ 2- ಪಾಕಿಸ್ತಾನ vs ಕ್ವಾಲಿಫೈಯರ್ ಟೀಮ್- ಶಾರ್ಜಾ

ಸೂಪರ್- 4 ವೇಳಾಪಟ್ಟಿ:

  1. ಸೆಪ್ಟೆಂಬರ್ 3 – B1 vs B2 – ಶಾರ್ಜಾ
  2. ಸೆಪ್ಟೆಂಬರ್ 4 A1 vs A2 – ದುಬೈ
  3. ಸೆಪ್ಟೆಂಬರ್ 6 A1 vs B1 – ದುಬೈ
  4. ಸೆಪ್ಟೆಂಬರ್ 7 A2 vs B2 – ದುಬೈ
  5. ಸೆಪ್ಟೆಂಬರ್ 8 A1 vs B2 – ದುಬೈ
  6. ಸೆಪ್ಟೆಂಬರ್ 9 B1 vs- A2 ದುಬೈ
  7. ಸೆಪ್ಟೆಂಬರ್ 11- ಫೈನಲ್ ಪಂದ್ಯ- ದುಬೈ

ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7.30 ಕ್ಕೆ ಪ್ರಾರಂಭವಾಗುತ್ತವೆ. ಇಲ್ಲಿ ಮೊದಲ ಸುತ್ತಿನಲ್ಲಿ ಗ್ರೂಪ್​ಗಳಲ್ಲಿನ ತಂಡಗಳು ಮುಖಾಮುಖಿಯಾಗಲಿದ್ದು, ಇದರಲ್ಲಿ ಅಗ್ರಸ್ಥಾನ ಪಡೆಯುವ 2 ತಂಡಗಳು ಸೂಪರ್-4 ಹಂತದಲ್ಲಿ ಆಡಲಿದೆ. ಅಂದರೆ ಎ ಗ್ರೂಪ್​ನಿಂದ 2 ತಂಡ, ಬಿ ಗ್ರೂಪ್​ನಿಂದ 2 ತಂಡಗಳು ಮುಂದಿನ ಹಂತಕ್ಕೇರಲಿದೆ. ಇನ್ನು ಸೆಪ್ಟೆಂಬರ್ 3 ರಿಂದ ಸೂಪರ್- 4 ತಂಡಗಳ ಮುಖಾಮುಖಿ ಶುರುವಾಗಲಿದೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024