Main News

ಆಕಾಶದಲ್ಲಿ ಇಂದು ಸಂಜೆ ವಿಸ್ಮಯ: ಗುರು- ಶನಿ ಸಂಯೋಗ – ಬರಿಗಣ್ಣಲ್ಲಿ ನೋಡಿ – ಮಿಸ್ ಆದ್ರೆ 60 ವರ್ಷ ಕಾಯಬೇಕು

ಆಕಾಶದಲ್ಲಿ ಇಂದು ಸಂಜೆ 800 ವರ್ಷಗಳ ಬಳಿಕ ಅಪರೂಪದ ವಿದ್ಯಮಾನ ಸಾಕ್ಷಿಯಾಗಲಿದೆ
ಸೂರ್ಯಾಸ್ತದ ನಂತರ ಗುರು, ಶನಿ ಗ್ರಹಗಳ ಸಂಗಮ ದೃಶ್ಯ ಬರಿಗಣ್ಣಿಗೆ ನೋಡುವ ಅವಕಾಶ ಸಿಗಲಿದೆ.

ಈ ಎರಡು ಗ್ರಹಗಳು ಕ್ರಿಸ್‍ಮಸ್ ಸ್ಟಾರ್ ರೀತಿಯಲ್ಲಿ ಕಾಣಲಿವೆ. ಈ ವಿಶೇಷಕ್ಕಾಗಿ ಮತ್ತೆ 60 ವರ್ಷಗಳ ಬಳಿಕವೇ.

ಗುರು-ಶನಿ ಸಂಯೋಗ:

ಈ ಎರಡು ಗ್ರಹಗಳು ಭೂಮಿಗೆ ನೇರವಾಗಿ ಒಂದೇ ರೇಖೆಯಲ್ಲಿ ಬರುವುದರಿಂದ ಒಂದೇ ಗ್ರಹದಂತೆ ಗೋಚರವಾಗುತ್ತವೆ. ಆದರೆ, ಗ್ರಹಗಳು ಒಂದರ ಹಿಂದೆ ಒಂದು ಇರಲಿದೆ. ಹಾಗಾಗಿ ಇದನ್ನು ಬಾಹ್ಯಾಕಾಶ ವಿಜ್ಞಾನಿಗಳು ಮಹಾ ಸಂಗಮ ಎಂದು ಕರೆಯುತ್ತಾರೆ.

ಒಂದೇ ರೇಖೆಯಲ್ಲಿ ಗುರು, ಶನಿ, ಚಂದ್ರ ಬರೋದರಿಂದ ಆಗಸದಲ್ಲಿ ತ್ರಿಕೋನಾಕೃತಿಯಲ್ಲಿ ಸಂಯೋಗ ಗೋಚರವಾಗುತ್ತದೆ. ಮುಂದೆ 2080ರಲ್ಲಿ ಈ ವಿದ್ಯಮಾನ ಘಟಿಸಲಿದೆ.

ಎಷ್ಟು ಗಂಟೆಗೆ ಸಮಾಗಮ: ಪಶ್ಚಿಮ ದಿಕ್ಕಿನಲ್ಲಿ ನೋಡಿ;

ಇಂದು ಸಂಜೆ 6 ಗಂಟೆ 15 ನಿಮಿಷದಿಂದ ರಾತ್ರಿ 8 ಗಂಟೆವರೆಗೆ ಗುರು-ಶನಿ ಸಂಯೋಗ ಕಾಣಬಹುದಾಗಿದೆ. ಸಂಜೆ ವೇಳೆ ಪಶ್ಚಿಮ ದಿಕ್ಕಿನಲ್ಲಿ ಗುರು-ಶನಿ ಸಂಯೋಗ ಕಾಣಸಿಗಲಿದೆ. 1 ಗಂಟೆ 45 ನಿಮಿಷಗಳ ಕಾಲ ಖಗೋಳ ವಿಸ್ಮಯವನ್ನು ಬರೀಗಣ್ಣಿನಿಂದ ನೋಡಬಹುದಾಗಿದೆ.
ಗುರು ಗ್ರಹದ ಪಕ್ಕದಲ್ಲಿ ಬಿಂದುವಿನ ರೀತಿಯಲ್ಲಿ ಶನಿ ಗೋಚರಿಸಲಿದೆ.

ಗುರು,ಶನಿ ಸಮಾಗಮ:

ಆಕಾಶಕಾಯಗಳ ಸಾಮೀಪ್ಯದ ವಿಶೇಷವೇ ಖಗೋಳ ವಿದ್ಯಮಾನ. 20 ವರ್ಷಗಳಿಗೊಮ್ಮೆ ಕಾಣುವ ವಿದ್ಯಮಾನವನ್ನ ಗ್ರೇಟ್ ಕಂಜಂಕ್ಷನ್ ಅಂತ ಕರೆಯುತ್ತಾರೆ. ಈ ಎರಡು ಗ್ರಹಗಳ ಅಂತರ 6.1 ಅರ್ಕ್ ಮಿನಿಟ್, ಅಂದ್ರೆ 0.1 ಡಿಗ್ರಿ ಇರುತ್ತೆ. ಹಿಂದೆ 1623ರಲ್ಲಿ ಈ ವಿದ್ಯಮಾನ ನಡೆದಿತ್ತು ಆದರೆ ಅದು ಗೋಚರಿಸಿರಲಿಲ್ಲ. ಅದಕ್ಕೂ ಹಿಂದೆ 1226 ರಲ್ಲಿ ಅದ್ರೆ 794 ವರ್ಷದ ಹಿಂದೆ ಗೋಚರಿಸಿತ್ತು. ಮತ್ತೊಮ್ಮೆ, 0.1 ಡಿಗ್ರಿ ಅಂತರದ ಸಮಾಗಮ ವೀಕ್ಷಿಸಲು 2080ರವರೆಗೆ ಕಾಯಬೇಕು. ಈ ವೈಶಿಷ್ಯವನ್ನು ನೋಡುವುದನ್ನು ಮಿಸ್ ಮಾಡಿಕೊಳ್ಳಬೇಡಿ. ಈ ಸಮಾಗಮ 1 ಗಂಟೆ 45 ನಿಮಿಷ ಮಾತ್ರ ಕಾಣಸಿಗುತ್ತದೆ.

Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024