ಮಧ್ಯರಾತ್ರಿ ಡಿಕೆಶಿ ನಿವಾಸಕ್ಕೆ ಪಾದಯಾತ್ರೆ ನಿಲ್ಲಿಸಿ ಎಂಬ ನೋಟಿಸ್ ಅಂಟಿಸಿದ ಪೊಲೀಸರು..!

Team Newsnap
1 Min Read

ಸರ್ಕಾರದ ಆದೇಶದಂತೆ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರ ಕನಕಪುರ ನಿವಾಸ ಗೇಟ್ ಗೆ ಮಧ್ಯರಾತ್ರಿ ನಂತರ ರಾಮನಗರ ಎಸಿ, ಡಿವೈಎಸ್​ಪಿ ನೋಟಿಸ್​ ಅಂಟಿಸಿ ಬಂದಿದ್ದಾರೆ

ಕನಕಪುರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಗೇಟ್​ ಮುಂದೆ ನೋಟಿಸ್ ಅಂಟಿಸಿ ಬಂದಿದ್ದಾರೆ.

ಡಿಕೆ ಶಿವಕುಮಾರ್ ನೋಟಿಸ್​ ಸ್ವೀಕರಿಸಲು ನಿರಾಕರಿಸಿದ ಹಿನ್ನೆಲೆ ಗೇಟ್​ಗೆ ನೋಟಿಸ್ ಅಂಟಿಸಿದ್ದಾರೆ ಎಂದು ಗೊತ್ತಾಗಿದೆ

ಇಂದು ಬೆಳಗ್ಗೆಯಿಂದ ಕನಕಪುರದಲ್ಲಿರುವ ಡಿಕೆಶಿ ನಿವಾಸದಲ್ಲಿ ಇರುತ್ತಿದ್ದ ಜನಸಂಖ್ಯೆ ಕಡಿಮೆ ಆಗಿದೆ. ಪಾದಯಾತ್ರೆ ಆರಂಭದ ದಿನದಿಂದಲೂ ಜನರ ದಂಡೇ ಸೇರುತ್ತಿತ್ತು. ಕೋರ್ಟ್ ಆದೇಶದ ಬೆನ್ನಲ್ಲೆ ಪಾದಯಾತ್ರೆ ಬಗ್ಗೆ ಅನಿಶ್ಚಿತತೆ ಮೂಡಿದೆ.

ಈ ಹಿನ್ನೆಲೆಯಲ್ಲಿ ಡಿಕೆಎಸ್ ನಿವಾಸದ ಬಳಿ ನಾಯಕರು, ಕಾರ್ಯಕರ್ತರು ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

Share This Article
Leave a comment