ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಒಲಂಪಿಕ್ಸ್ ಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಮಾಡಿ ಶುಭಾಶಯ ಹೇಳಿದ್ದರು. ಅದಕ್ಕೆ ಪ್ರತಿಯಾಗಿ ಆ ಕ್ರೀಡಾಪಟುಗಳು ಪ್ರಧಾನಿಯ ಮನವಿಯೊಂದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕನಿಷ್ಠ 75 ಶಾಲೆಗಳಿಗೆ ಹೋಗುವಂತೆ ತಾವು ಮಾಡಿದ ಮನವಿಗೆ ಕ್ರೀಡಾಪಟುಗಳು ಸಮ್ಮತಿಸಿದ್ದಾರೆ ಎಂದು ಸ್ವತಃ ಮೋದಿ ಅವರು ಮಂಗಳವಾರ ನವದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ “ಶಿಕ್ಷಕ ಪರ್ವ’ ಉದ್ಘಾಟಿಸಿದ ಸಂದರ್ಭದಲ್ಲಿ ಹೇಳಿದರು. ಭಾರತೀಯ ಕ್ರೀಡಾಪಟುಗಳ ಸಾಧನೆಯನ್ನು ಶ್ಲಾಘಿಸಿ, ಭಾರತದ ಯುವ ಪೀಳಿಗೆಗೆ ಅವರು ಸ್ಪೂರ್ತಿಯಾಗಿದ್ದಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.
ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಮ್ಮ ಶಿಕ್ಷಣ ವ್ಯವಸ್ಥಯನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿ ಮಾಡುವುದಲ್ಲದೆ ಯುವಕರ ಭವಿಷ್ಯವನ್ನು ರೂಪಿಸಲಿದೆ ಎಂದು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳಲ್ಲಿ ಜನರು ಮುಖ್ಯ ಪಾತ್ರ ವಹಿಸಿದ್ದಾರೆ. ಜನರ ಸಹಭಾಗಿತ್ವ ಇಲ್ಲದೇ ಸ್ವಚ್ಛ ಭಾರತದಂತಹ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿರಲಿಲ್ಲ ಎಂದು ಪ್ರತಿಪಾದಿಸಿದರು.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment