ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ.
ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ತೀರ್ಮಾನ ಮಾಡಿದ್ದು, ಇದೀಗ ಸಿಎಂ ಗಾದಿಗೆ ನೂತನ ಹೆಸರನ್ನು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರನ್ನು ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಬಂಧಿಸಿತ್ತು. ಕೇಜ್ರಿವಾಲ್ ಅವರು ತಿಹಾರ್ ಜೈಲು ಪಾಲಾಗಿದ್ದರು.ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ
ಇದೀಗ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಬಳಿಕ ಕೇಜ್ರಿವಾಲ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದು ,ಈಗ ನವದೆಹಲಿಗೆ ನೂತನ ಮುಖ್ಯಮಂತ್ರಿಯಾಗಿ ಅತಿಶಿಯನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.