ಹನೂರು : ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪ್ರವೇಶ ಮಾಡಿ ವನ್ಯಜೀವಿ ಜಿಂಕೆಯನ್ನು ಕೊಂದು ಅದನ್ನು ಕತ್ತರಿಸಿ ಮಾರಾಟ ಮಾಡಲು ಯತ್ನಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ತಾಲೂಕಿನ ಕಾಂಚಳ್ಳಿ ಗ್ರಾಮದ ನಾಗರಾಜು (38) ಬಿನ್ ಕಾಳೆಗೌಡ ಮತ್ತು ಹನೂರು ಪಟ್ಟಣದ ತೇಜಸ್ (21) ಬಿನ್ ಮಾದೇಶ ಇವರು ಬಂಧಿತ ಆರೋಪಿಗಳು.
ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹನೂರು ವನ್ಯಜೀವಿ ಉಪ ವಿಭಾಗದ ಬಫರ್ ವಲಯದ ಹನೂರು ಶಾಖೆಯ ಎಲ್ಲೇಮಾಳ ಗಸ್ತಿನ ಅರಕನಹಳ್ಳ ಅರಣ್ಯ ಪ್ರದೇಶದಲ್ಲಿ ನಾಗರಾಜು ಮತ್ತು ತೇಜಸ್ ಇವರು ವನ್ಯಜೀವಿ ಜಿಂಕೆಯನ್ನು ಕೊಂದು ಅದರ ಮಾಂಸವನ್ನು ತುಂಡು ತುಂಡಾಗಿ ಕತ್ತರಿಸುತ್ತಿದ್ದರು.ನನ್ನ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ, ಮಂಡ್ಯ ದತ್ತುಕೊಟ್ಟಿಲ್ಲ – ಸಚಿವ ಚಲುವರಾಯಸ್ವಾಮಿ
ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾಕ್ಟರ್.ಜಿ. ಸಂತೋಷ್ ಕುಮಾರ್ ಐ.ಎಫ್.ಎಸ್ ರವರ ಮಾರ್ಗದರ್ಶನದಂತೆ ಹನೂರು ಬಂಪರ್ ವಲಯದ ಅರಣ್ಯ ಅಧಿಕಾರಿಗಳಾದ ಪ್ರವೀಣ್ ಸಿ, ಮತ್ತು ಸಿಬ್ಬಂದಿಗಳು ಗಸ್ತು ಮಾಡುತ್ತಿದ್ದ ಸಂದರ್ಭದಲ್ಲಿ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿಗಳಾದ ನಾಗರಾಜು ಮತ್ತು ತೇಜಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ವರದಿ :- ನಾಗೇಂದ್ರ ಪ್ರಸಾದ್
- ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
- ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
- ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
- ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
- ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ
- ಭಾರತೀಯ ಗ್ರಂಥಾಲಯ ಪಿತಾಮಹ -ಪದ್ಮಶ್ರೀ ಡಾ. ಎಸ್. ಆರ್. ರಂಗನಾಥನ್
More Stories
ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ
ಬೆಂಗಳೂರು ಹೊರತಾಗಿ ಇತರ ಭಾಗಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ: ಡಿ.ಕೆ. ಶಿವಕುಮಾರ್
ಮೈಸೂರು: ಅವಹೇಳನಕಾರಿ ಪೋಸ್ಟ್ ಹಿನ್ನಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ