ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ –ಕೋಪ್ರೋದ್ರಿಕ್ತ ಗುಂಪಿನಿಂದ ಯುವಕನ ಹತ್ಯೆ

Team Newsnap
1 Min Read

ಅಮೃತಸರದ ಸ್ವರ್ಣ ಮಂದಿರವನ್ನು ಅಪವಿತ್ರಗೊಳಿಸಲು ಯತ್ನಿಸಿದ ಆರೋಪ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ಕೋಪ್ರೋದ್ರಿಕ್ತರು ತೀವ್ರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ.

ಪ್ರತಿನಿತ್ಯ ಸಂಜೆ ನಡೆಯುವ ಪ್ರಾರ್ಥನೆ ವೇಳೆ ರೇಲಿಂಗ್( ಕಬ್ಬಿಣದ ಸರಪಳಿಯನ್ನು) ದಾಟಿ, ಆ ಸ್ಥಳಕ್ಕೆ ಜಿಗಿದು ಬಂದ ವ್ಯಕ್ತಿಯೋರ್ವ ಗುರು ಗ್ರಂಥ ಸಾಹೀಬ್ (ಸಿಖ್ ಧರ್ಮದ ಪವಿತ್ರವಾದ ಗ್ರಂಥ) ಬಳಿ ಇರಿಸಲಾದ ಖಡ್ಗವನ್ನು ಎತ್ತಿಕೊಳ್ಳಲು ಪ್ರಯತ್ನಿಸಿದ್ದಾನೆ.

ಈ ವೇಳೆ ಕರ್ತವ್ಯನಿರತ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಕೊಠಡಿಗೆ ಎಳೆದೊಯ್ದು ವಿಚಾರಣೆ ನಡೆಸಿ ತೀವ್ರವಾಗಿ ಥಳಿಸಿದ್ದಾರೆ.

ಇದರಿಂದ ಗಂಭೀರವಾಗಿ ಹಲ್ಲೆಗೆ ಒಳಗಾದ ವ್ಯಕ್ತಿ ಮೃತಪಟ್ಟಿದ್ದಾನೆ.
ಈ ಕೃತ್ಯ ಕುರಿತಂತೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯ (ಎಸ್‍ಜಿಪಿಸಿ) ಕಾರ್ಯನಿರ್ವಾಹಕ ಸದಸ್ಯ ಭಾಯಿ ಗುರುಪ್ರೀತ್ ಸಿಂಗ್ ರಾಂಧವಾ ಅವರು, ಅಮೃತಸಾರದ ಸ್ವರ್ಣ ಮಂದಿರದಲ್ಲಿ ನಡೆದ ಈ ಅಹಿತಕರವಾದ ಘಟನೆಯನ್ನು ನಾನು ಖಂಡಿಸುತ್ತೇನೆ. ಪಂಜಾಬ್ ಸರ್ಕಾರ ಈ ವಿಚಾರವಾಗಿ ತಕ್ಷಣವೇ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

Share This Article
Leave a comment