ಅಕ್ರಮ ಚಿನ್ನ ಸಾಗಾಣೆ ಮಾಡುತ್ತಿದ್ದ 10 ಮಂದಿಯನ್ನು ಏರ್ ಪೋಟ್ ನಲ್ಲಿ ಬಂಧಿಸಿದ ಅಧಿಕಾರಿಗಳು, ಗುದನಾಳದಲ್ಲಿಟ್ಟು 1.52 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 10 ಮಂದಿ ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನವೆಂಬರ್ 20 ರಂದು ಕೊಲಂಬೊದಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ತಪಾಸಣೆ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಈ ವೇಳೆ 10 ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಯ ಆರೋಪಿಗಳಿಂದ 3066.55 ಗ್ರಾಂ ತೂಕದ 1 ಕೋಟಿ 51 ಲಕ್ಷದ 79 ಸಾವಿರ ಮೌಲ್ಯದ ಚಿನ್ನವನ್ನ ಜಪ್ತಿ ಪಡೆಯಲಾಗಿದೆ.
ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ