ಆಟೋ ಚಾಲಕನಾಗಿದ್ದ ಏಕನಾಥ್ ಸಿಂಧೆ ಈಗ ಮಹಾರಾಷ್ಟ್ರದ ಅಧಿಪತಿ. ಸಿಂಧೆ ರಾಜಕೀಯದ ಚದುರಂಗದ ಆಟ ರೋಚಕವಾಗಿದೆ.
ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಳಿಸಿದ ನಂತರ ನೂತನ ಮುಖ್ಯಮಂತ್ರಿಯಾಗಿ ಗುರುವಾರ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.ಇದನ್ನು ಓದಿ –ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿಯಾಗಿ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ
ಇಂದು ರಾತ್ರಿಯಿಂದ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಮುಂಬೈನ ಥಾಣೆ ಭಾಗದವರಾದ ಏಕನಾಥ ಶಿಂಧೆ ಹೊಟ್ಟೆಪಾಡಿಗಾಗಿ ಆಟೋ ಚಾಲನೆ ಮಾಡ್ತಾ ಇದ್ದವರು.
1980 ರಲ್ಲಿ ಬಾಳ್ ಠಾಕ್ರೆಯ ಅಪ್ಪಟ ಅಭಿಮಾನಿಯಾಗಿ ಶಿವಸೇನೆ ಸೇರ್ಪಡೆಯಾಗಿ, ಆ ಮೂಲಕ ರಾಜಕೀಯ ಎಂಟ್ರಿ. ಥಾಣೆ ಭಾಗದಲ್ಲಿ ಸಂಘಟನೆ ಮಾಡುತ್ತಾ ಮಾಸ್ ಲೀಡರ್ ಆಗಿ ಬೆಳವಣಿಗೆ ಸಾಧಿಸುತ್ತಾರೆ.
ಶಿವಸೇನೆ ಪಕ್ಷಕ್ಕೆ ಬಲ, ಠಾಕ್ರೆ ಕುಟುಂಬದ ಜೊತೆ ಆಪ್ತವಾಗಿ ಗುರುತಿಸಿಕೊಳ್ಳುತ್ತಾರೆ, ದೊಡ್ಡ ದೊಡ್ಡ ಸಭೆ ಸಮಾರಂಭಗಳ ಆಯೋಜನೆಯ ಜವಾಬ್ದಾರಿ ಹೊಣೆ. 1997 ರಲ್ಲಿ ಮುಂಬೈನ ಥಾಣೆ ಕಾರ್ಪೋರೇಟರ್ ಆಗಿ ಆಯ್ಕೆ. 2004 ರಲ್ಲಿ ಶಿವಸೇನೆಯಿಂದ ಕಲ್ಯಾಣ್ ಕ್ಷೇತ್ರದ ಎಂಎಲ್ಎ ಸ್ಥಾನಕ್ಕೆ ಸ್ಪರ್ಧೆ ಮಾಡಿ ಭರ್ಜರಿ ಗೆಲುವು ಸಾಧಿಸುತ್ತಾರೆ, ಅನಂತರ ನಾಲ್ಕು ಬಾರಿ ಸತತವಾಗಿ ಗೆಲುವು . 2014 ರಲ್ಲಿ ಶಿವಸೇನೆಯಿಂದ ಶಾಸಕಾಂಗ ಪಕ್ಷದ ನಾಯಕರಾಗಿಯೂ ಆಯ್ಕೆ . 2019 ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯಾದಾಗ ನಗರಾಭಿವೃದ್ಧಿ ಖಾತೆಯ ಜವಾಬ್ದಾರಿ . ಥಾಣೆ ಭಾಗದಲ್ಲಿ ಭಾರೀ ಪ್ರಭಾವಿ ಮರಾಠ ಮುಖಂಡರಾಗಿ ಗುರುತಿಸಿಕೊಳ್ಳುತ್ತಾರೆ.
ಒಂದು ಕಾಲದಲ್ಲಿ ಆಟೋ ಡ್ರೈವರ್ ಆಗಿ ಹೊಟ್ಟೆಪಾಡಿಗಾಗಿ ಕೆಲಸ ಮಾಡ್ತಾ ಇದ್ದವರು. ಶ್ರೀರಾಮನ ಜೊತೆ ಬಂಟನಾಗಿ ಹನುಮಂತ ಇರುವಂತೆ ಠಾಕ್ರೆ ಕುಟುಂಬದ ಜೊತೆ ಸಾಕ್ಷಾತ್ ಹನುಮಂತನಂತೆ ಶಿಂಧೆ ಇದ್ದರು.
ಶಿಂಧೆ ವಿರುದ್ದ 18 ಕ್ರಿಮಿನಲ್ ಕೇಸ್
ಸಿಎಂ ಏಕನಾಥ್ ಶಿಂಧೆ ವಿರುದ್ಧ ಬರೋಬ್ಬರಿ 18 ಕ್ರಿಮಿನಲ್ ಕೇಸುಗಳು ದಾಖಲಾಗಿವೆ. ಆದ್ರೆ ಒಂದರಲ್ಲೂ ಅವರು ಶಿಕ್ಷೆಗೆ ಗುರಿಯಾಗಿಲ್ಲ. ಒಂದು ಕೇಸಿನಲ್ಲೂ ಅವರು ಮೇಲ್ಮನವಿ ಹೋಗಿಲ್ಲ. ಸ್ವತಃ ಏಕನಾಥ ಶಿಂಧೆ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಶಿಂಧೆಯ ಕ್ರಿಮಿನಲ್ ಕೇಸುಗಳ ಸಂಕ್ಷಿಪ್ತ ವಿವರ ಉಲ್ಲೇಖವಾಗಿದೆ. ಬಹುತೇಕ ಕೇಸುಗಳು ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಟ್ಟಿರುವುದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡಿರುವುದು.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ