ಅನಧಿಕೃತ ರ್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಮಧ್ಯರಾತ್ರಿ 12 ರಿಂದ 24 ಗಂಟೆಗಳ ಕಾಲ ನಗರದಲ್ಲಿ ಆಟೋ ಸಂಚಾರ ಸ್ಥಗಿತಗೊಳಿಸಲಾಗಿದೆ.
ಆಟೋ ಚಾಲಕರು ನಾಳೆ ಬೆಳಗ್ಗೆ 11 ಗಂಟೆಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ (Basavaraj Bommai) ರೇಸ್ ಕೋರ್ಸ್ ನಿವಾಸಕ್ಕೆ ತೆರಳಲಿದ್ದಾರೆ .
ಕಪ್ಪು ಪಟ್ಟಿ ಧರಿಸುವ ಮೂಲಕ ಆಟೋ ಚಾಲಕರು ತಮ್ಮ ಆಕ್ರೋಶ ವ್ಯಕ್ತಪಡಿಸಿ , ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್ಲೈನ್ ನೀಡಲಿದ್ದಾರೆ .
ರ್ಯಾಪಿಡೋ ಬೈಕ್ ಟ್ಯಾಕ್ಸಿಗಳಿಂದ ತಮಗೆ ಬಾಡಿಗೆ ದೊರಕದೆ ಜೀವನ ಸಾಗಿಸಲು ತೊಂದರೆಯಾಗುತ್ತಿದೆ ಎಂದು ಚಾಲಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ 21 ಆಟೋ ಚಾಲಕರ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿ , ಯೆಲ್ಲೋ ಬೋರ್ಡ್ ಹಾಕಿಕೊಂಡು ಬೈಕ್ ಟ್ಯಾಕ್ಸಿ ಸೇವೆ ನೀಡಲಿ ಎಂದು ಹೇಳಿದ್ದಾರೆ .
ಓಲಾ (Ola), ಊಬರ್ನಲ್ಲೂ (Ubar) ಆಟೋ ಸೇವೆ ಲಭ್ಯವಿರುವುದಿಲ್ಲ ಮತ್ತು 2 ಲಕ್ಷದ 10 ಸಾವಿರ ಆಟೋಗಳ ಸಂಚಾರ ಬಂದ್ ಆಗುವ ಸಾಧ್ಯತೆ ಕಂಡುಬರುತ್ತಿದೆ.
ಸಾರಿಗೆ ಸಚಿವರಾದ ಶ್ರೀರಾಮುಲು ರವರು ಆರ್ಟಿಓಗೆ ರ್ಯಾಪಿಡೋ ಬ್ಯಾನ್ ಮಾಡಲು ವರದಿ ಕೇಳಿದ್ದಾರೆ.
ಆಟೋ ಚಾಲಕರಿಗೆ ಚುನಾವಣೆಯೊಳಗೆ ಸಿಹಿ ಸುದ್ದಿ ನೀಡುವುದಾಗಿ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ .ಇದನ್ನು ಓದಿ –ರಾಜ್ಯ ವಿಧಾನಸಭೆಗೆ ಮಾರ್ಚ್ ಅಂತ್ಯಕ್ಕೆ ಚುನಾವಣೆ ಘೋಷಣೆ ?
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment