ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಕಾರ್ಯಕರ್ತರು ಮಹಾಮೇಳವನ್ನು ಆಯೋಜಿಸಿ ಉದ್ಧಟತನ ಮೆರೆದು, ಬೆಳಗಾವಿ ಪಾಲಿಕೆ ಸಿಬ್ಬಂದಿಗೆ ಎಂಇಎಸ್ನ ಕೆಲವು ಪುಂಡರು ಆವಾಜ್ ಹಾಕಿರುವ ಘಟನೆ ವಿಕೋಪಕ್ಕೆ ತಿರುಗಿದೆ
ಈ ಘಟನೆಯಿಂದ ಕೆರಳಿದ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡರಿಗೆ ಮಸಿ ಬಳಿದಿದ್ದಾರೆ.
ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಆಗ ಆಕ್ರೋಶಗೊಂಡ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದು ಸೇಡು ತೀರಿಸಿಕೊಂಡಿದ್ದಾರೆ.
ಎಂಇಎಸ್ ಕಾರ್ಯಕರ್ತರು ಅನಧಿಕೃತವಾಗಿ ವೇದಿಕೆ ನಿರ್ಮಾಣ ಮಾಡಿದ್ದರು. ಇದನ್ನು ಪಾಲಿಕೆ ಸಿಬ್ಬಂದಿ ತೆರವು ಮಾಡಲು ಮುಂದೆ ಬಂದಾಗ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗಾವಿ ಬಂದ್ ?
ಸದ್ಯ ಅಲ್ಲಿನ ಪರಿಸ್ಥಿತಿ ಕೊಂಚ ವಿಷಮಗೊಂಡಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಕೆಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಮಸಿ ಬಳಿಯುತ್ತಿದ್ದಂತೆ ಎಂಇಎಸ್ ಮುಖಂಡರು ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಿದ್ದಾರೆ.
ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್ ಬಂದ್ಗೆ ಕರೆ ನೀಡಿದ್ದಾರೆ. ಮಸಿ ಬಳಿದಿರುವ ಘಟನೆಯ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇನೆ. ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರ ಗಮನಕ್ಕೂ ತರುತ್ತೇನೆ. ಅಲ್ಲದೇ ನಾಳಿನ ಬಂದ್ ಯಶಸ್ವಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು