ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಕಾರ್ಯಕರ್ತರು ಮಹಾಮೇಳವನ್ನು ಆಯೋಜಿಸಿ ಉದ್ಧಟತನ ಮೆರೆದು, ಬೆಳಗಾವಿ ಪಾಲಿಕೆ ಸಿಬ್ಬಂದಿಗೆ ಎಂಇಎಸ್ನ ಕೆಲವು ಪುಂಡರು ಆವಾಜ್ ಹಾಕಿರುವ ಘಟನೆ ವಿಕೋಪಕ್ಕೆ ತಿರುಗಿದೆ
ಈ ಘಟನೆಯಿಂದ ಕೆರಳಿದ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡರಿಗೆ ಮಸಿ ಬಳಿದಿದ್ದಾರೆ.
ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.
ಆಗ ಆಕ್ರೋಶಗೊಂಡ ಕರ್ನಾಟಕ ನವ ನಿರ್ಮಾಣ ಪಡೆಯ ಕಾರ್ಯಕರ್ತರು, ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದು ಸೇಡು ತೀರಿಸಿಕೊಂಡಿದ್ದಾರೆ.
ಎಂಇಎಸ್ ಕಾರ್ಯಕರ್ತರು ಅನಧಿಕೃತವಾಗಿ ವೇದಿಕೆ ನಿರ್ಮಾಣ ಮಾಡಿದ್ದರು. ಇದನ್ನು ಪಾಲಿಕೆ ಸಿಬ್ಬಂದಿ ತೆರವು ಮಾಡಲು ಮುಂದೆ ಬಂದಾಗ ಅವಾಜ್ ಹಾಕಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗಾವಿ ಬಂದ್ ?
ಸದ್ಯ ಅಲ್ಲಿನ ಪರಿಸ್ಥಿತಿ ಕೊಂಚ ವಿಷಮಗೊಂಡಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಕೆಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಮಸಿ ಬಳಿಯುತ್ತಿದ್ದಂತೆ ಎಂಇಎಸ್ ಮುಖಂಡರು ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಿದ್ದಾರೆ.
ಎಂಇಎಸ್ ಮಾಜಿ ಶಾಸಕ ಮನೋಹರ್ ಕಿಣೇಕರ್ ಬಂದ್ಗೆ ಕರೆ ನೀಡಿದ್ದಾರೆ. ಮಸಿ ಬಳಿದಿರುವ ಘಟನೆಯ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇನೆ. ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ ನಾಯಕರ ಗಮನಕ್ಕೂ ತರುತ್ತೇನೆ. ಅಲ್ಲದೇ ನಾಳಿನ ಬಂದ್ ಯಶಸ್ವಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment