February 25, 2026

Newsnap Kannada

The World at your finger tips!

ambedkar

ಅಂಬೇಡ್ಕರ್ ಹೆಸರಿನಲ್ಲಿ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ : ಸುಭಾಷ್ ಹೊದ್ಲೂರುಗೆ ಅಭಿನಂದನೆಗಳು

Spread the love

ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರು ಇಬ್ಬರು ಮೂಲತಃ ಪತ್ರಕರ್ತರಾಗಿ, ಚಳವಳಿಗಾರರಾಗಿ ದೇಶಕ್ಕೆ ತಮ್ಮ ಬದುಕು ಮುಡಿಪಾಗಿಟ್ಟದ್ದನ್ನು ಯಾರೂ ಮರೆಯುವಂತಿಲ್ಲ.
ಭಾರತದ ಸ್ವಾತಂತ್ರ್ಯ ಚಳವಳಿಗೆ ಈ ಮಹಾನ್ ವ್ಯಕ್ತಿಗಳ ಕೊಡುಗೆ ಅಪಾರ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಸ್ಮರಣಾರ್ಥ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ)ಲ್ಲಿ ಪ್ರಶಸ್ತಿ ದತ್ತಿ ನಿಧಿ ಸ್ಥಾಪನೆ ಮಾಡಲು
ಬಾಗಲಕೋಟೆ ಜಿಲ್ಲೆ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಭಾಷ್ ಹೊದ್ಲೂರು 2.50 ಲಕ್ಷ (ಎರಡೂವರೆ ಲಕ್ಷ ರೂ) ರೂಗಳನ್ನು ಸಂಘದ ಬ್ಯಾಂಕ್ ಖಾತೆಗೆ ಕಳುಹಿಸಿಕೊಟ್ಟಿದ್ದಾರೆ.

ಈ ಹಣದಲ್ಲಿ ಬರುವ ವಾರ್ಷಿಕ ಬಡ್ಡಿ ಹಣದಲ್ಲಿ ಪ್ರತಿ ವರ್ಷ ಕೆಯುಡಬ್ಲ್ಯೂಜೆ ರಾಜ್ಯ ಸಮ್ಮೇಳನದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ನೀಡಲಾಗುವುದು.

ಕೆಯುಡಬ್ಲ್ಯೂಜೆ ದತ್ತಿ ನಿಧಿ ಪ್ರಶಸ್ತಿಗೆ ಉದಾರ ದೇಣಿಗೆ ನೀಡಿದ ಶ್ರೀ ಸುಭಾಷ್ ಹೊದ್ಲೂರು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು
ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

error: Content is protected !!