Mandya

ಮಂಡ್ಯ ದಲ್ಲಿ ಜಾಗೃತಿ ಹೆಚ್ಚು-ಕೊರೋನಾ ಸಾವು ಕಮ್ಮಿ: ಡಾ. ಶಿವಕುಮಾರ್

ಪ್ರಸ್ತುತ ದಿನಗಳಲ್ಲಿ ವಿಶ್ವವನ್ನೇ ಕಾಡುತ್ತಿರುವ ಕೇೂವಿಡ್ 19ರ ನಿಯಂತ್ರಣದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಮತ್ತು ಜಾಗೃತಿಕಾರ್ಯಕ್ರಮಗಳಿಂದಾಗಿ ಹೆಚ್ಚಿನ ಸಾವುನೇೂವುಗಳನ್ನು ತಡೆಗಟ್ಟಲು ಸಾದ್ಯವಾಯಿತು ಎಂದು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲರು,ಡಾ:ಕೆ.ಎಂ.ಶಿವಕುಮಾರ್ ಅವರು ತಿಳಿಸಿದರು.

ಮಂಡ್ಯದ ಕೆ.ವಿ.ಶಂಕರಗೌಡ ಶತಮಾನೇೂತ್ಸವ ಭವನದಲ್ಲಿ ಕೀಲಾರದ ಕ್ಷೀರಸಾಗರ ಮಿತ್ರಕೂಟ ಆಯೇೂಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಿದ್ದ ಡಾ. ಶಿವಕುಮಾರ್ ನೆರೆ ಜಿಲ್ಲೆಗಳಿಗೆ ಹೇೂಲಿಸಿದರೆ ಮಂಡ್ಯದ ಜನರ ಸಹಕಾರ,ವೈದ್ಯರಸೇವೆ,ಸಾರ್ವಜನಿಕರ ನೆರವು ಅತ್ಯುತ್ತಮ ವಾಗಿತ್ತು ಎಂದು ತಿಳಿಸಿದರು.
ಮತ್ತೊಬ್ಬ ಅಭಿನಂದಿತರಾದ ಜನತಾ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಕೆ.ಎಸ್.ವಿಜಯಾನಂದ ಮಾತನಾಡಿ ನಮ್ಮ ತಾತನವರು ಕಟ್ಟಿದ ಸಂಸ್ಥೆಗೆ ನಾನು ಅಧ್ಯಕ್ಷನಾಗಿರುವುದು ನನ್ನ ಪುಣ್ಯ, ಸಂಸ್ಥೆಯನ್ನು ಹೆಮ್ಮರವಾಗಿ ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು. ನನಗೆ ನೀಡಿರುವ ಎಲ್ಲಾ ಗೌರವಗಳಿಗಿಂತ ನನ್ನ ತವರೂರಿನ ಜನರು ನೀಡಿರುವ ಸನ್ಮಾನ ನನಗೆ ಹೆಚ್ಚು ಸಂತೇೂಷವನ್ನುಂಟುಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಂ.ಶ್ರೀನಿವಾಸ್ ಮಾತನಾಡಿ ನನ್ನ ಎಲ್ಲಾ ಸಾಮಾಜಿಕ ಕೆಲಸಗಳಿಗೆ ನಿತ್ಯ ಸಚಿವ ಕೆ.ವಿ.ಶಂಕರಗೌಡರು ಸ್ಪೂರ್ಥಿ,ಅಂತಹ ಊರಿನ ಕ್ಷೀರಸಾಗರ ಮಿತ್ರಕೂಟ ಕಳೆದ 20ವರ್ಷಗಳಿಂದ ಉತ್ತಮ. ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಮುಂದೆ ಈ ಸಂಘಟನೆ ತನ್ನ ಕೆಲಸಗಳನ್ನು ಮುಂದುವರೆಸಲಿ ನನ್ನ ಸಹಕಾರವಿರುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಸಂಘದ ಸ್ಥಾಪಕ ಕಾರ್ಯದರ್ಶಿ ವೀರಪ್ಪ ಸರ್ಕಾರಿ ಕೆಲಸದಿಂದ ನಿವೃತ್ತರಾದ ಹಿನ್ನಲೆಯಲ್ಲಿ ಸನ್ಮಾನಿಸಲಾಯಿತು. ಮೈಸೂರು ವಿ.ವಿ.ಯ ನಿವೃತ್ತ ಪ್ರಸಾರಾಂಗ ನಿರ್ದೇಶಕ ಕೆ.ಟಿ.ವೀರಪ್ಪ ಅಭಿನಂದನಾ ಮಾತುಗಳನ್ನಾಡಿದರು ಮುಖ್ಯ ಅತಿಥಿಗಳಾಗಿ ಈ ಮಹದೇವ ವಕೀಲರಾದ ಕೆ.ಸಿ.ರಘು ಭಾಗವಹಿಸಿದ್ದರು.ವೇದಿಕೆಯಲ್ಲಿ ಸಂಘದ ಗೌರವಾದ್ಯಕ್ಷರಾದ ಕೆ.ಪಿ.ವೀರಪ್ಪ,ಪೇೂಷಕರಾದ ಡಿ.ಶಿವರಾಜು,ಹೆಚ್.ಸಿ.ಕಾಂತರಾಜು,
ಅಧ್ಯಕ್ಷ ಕೆ.ಜಯಶಂಕರ್,ಕಾರ್ಯದರ್ಶಿ ಕಾಳಮ್ಮನ ನಾಗೇಶ್. ಕೀಲಾರ ಕೃಷ್ಣೇಗೌಡ ಇತರರು ಉಪಸ್ಥಿತರಿದ್ದರು.

Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024