ಪ್ರಜೆಗಳು ಮಹಿಶಾಸುರನೆಂಬ ರಾಕ್ಷಸನಿಂದ ವಿವಿಧ ರೀತಿಯ ತೊಂದರೆಗಳಿಗೆ ಒಳಗಾಗಿರುತ್ತಾರೆ. ದೇವರಿಂದ ಮಹೋನ್ನತ ವರವನ್ನು ಪಡೆದ ಗರ್ವದಿಂದ ಮಹಿಷಾಸುರ ಎಲ್ಲರಿಗೂ ತೊಂದರೆ ಕೊಡಲು ಆರಂಭಿಸುತ್ತಾನೆ. ಮಹಿಷಾಸುರ ಕಾಟ ತಡೆಯಲಾಗದ ಇಂದ್ರಾದಿ ದೇವತೆಗಳು ಮತ್ತು ಪ್ರಜೆಗಳು ಎಲ್ಲರೂ ಸೇರಿ ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುತ್ತಾರೆ.
ಮಹಿಶಾಸುರನಿಂದ ತಮಗಾಗುತ್ತಿರುವ ಉಪಟಳದಿಂದ ಪಾರು ಮಾಡುವಂತೆ ಕೇಳಿಕೊಳ್ಳುತ್ತಾರೆ. ಆಗ ತಾಯಿ ಚಾಮುಂಡೇಶ್ವರಿಯು ಉಗ್ರ ರೂಪ ತಳೆದು ಘೋರ ಯುದ್ಧ ಮಾಡಿ ಮಹಿಶಾಸುರನನ್ನು ಕೊಂದು ಪ್ರಜೆಗಳನ್ನು ಕಾಪಾಡುತ್ತಾಳೆ.
ತಾಯಿ ಚಾಮುಂಡೇಶ್ವರಿ ಮಹಿಷಾಸುರನನ್ನು ನವರಾತ್ರಿಯ ಒಂಬತ್ತನೇ ದಿನದಂದು ಸಂಹರಿಸಿ ಲೋಕಕ್ಕೆ ಶಾಂತಿಯನ್ನು ತಂದಳೆಂಬ ನಂಬಿಕೆಯ ದ್ಯೋತಕವಾಗಿ ಮಹಿಷಾಸುರನ ಸಂಹಾರ ಮಾಡಲು ತಾಯಿ ಚಾಮುಂಡಿ ಬಳಕೆ ಮಾಡಿದ ಆಯುಧಗಳನ್ನೆಲ್ಲಾ ಸೇರಿಸಿ ಪೂಜೆ ಮಾಡುವುದೇ ಆಯುಧ ಪೂಜೆಯ ಪ್ರತೀಕ ಎಂದು ಹೇಳಲಾಗುತ್ತದೆ.
ಆಧ್ಯಾತ್ಮಿಕ ಭಾವನೆ ಮೂಡಿಸುವ ಆಯುಧ ಪೂಜೆ ನಾವು ಬಳಸುವ ವಸ್ತುಗಳನ್ನು ಪೂಜೆ ಮಾಡುತ್ತೇವೆ,ನಾವು ಏನು ವೃತ್ತಿ ಮಾಡುತ್ತೇವೋ ಆ ವಸ್ತುಗಳನ್ನು ಪೂಜಿಸಲಾಗುವುದು.
ನವರಾತ್ರಿಯ ಕೊನೆಯ ದಿನದ ಆಚರಣೆ ಮಹಾನವಮಿಯಂದು ಆಯುಧ ಪೂಜೆಗೆ ಹೆಚ್ಚಿನ ಮಹತ್ವ. ತರಕಾರಿ ಹೆಚ್ಚುವ ಚಾಕುವಿನಿಂದ ಹಿಡಿದು ದೇಶದ ರಕ್ಷಣೆಗಾಗಿ ಬಳಸಲಾಗುವ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಕೂಡ ಆಯುಧ ಪೂಜೆಯಂದು ಪೂಜಿಸಲಾಗುತ್ತದೆ.
ಆಯುಧಪೂಜೆಯಲ್ಲಿ ಸಲ್ಲಿಸುವ ಪೂಜೆ ಅದೊಂದು ಭಾವನಾತ್ಮಕವಾಗಿದೆ, ಕೃಷಿಕನಿಗೆ ಗುದ್ದಲಿ, ಪಿಕಾಸು ಇಂಥ ವಸ್ತುಗಳು ಪ್ರಮುಖ, ಟೈಲರಿಂಗ್ ಮೆಷಿನ್, ಕಾರ್ಖಾನೆಗಳಲ್ಲಿರುವ ಮೆಷಿನ್ಗಳು. ಸೈಕಲ್ ಗಳು ಕಾರುಗಳು,ಗಾಡಿಗಳು, ಆಯುಧ ಪೂಜೆಯ ದಿನ ಜನರು ನಮ್ಮನ್ನು ಸಾಕಿ ಸಲುಹುವ ಉಪಕರಣಗಳಿಗೆ ಶ್ರದ್ಧಾ ಭಕ್ತಿಯಿಂದ ಪೂಜೆಮಾಡಿ ಅವುಗಳಿಗೆ ಕೃತಜ್ಞತೆ ಸಲ್ಲಿಸುವ ದಿನವೇ ಆಯುಧ ಪೂಜೆ.
ಆಯುಧ ಪೂಜೆಯ ದಿನದಂದು ಮಾವಿನ ಸೊಪ್ಪು, ಬಾಳೆಕಂದು, ಕಬ್ಬು ಹಾಗೂ ಚಂಡು ಹೂವುಗಳಿಂದಲೂ ಆಲಂಕಾರವಾಗಿರುವ ವಾಹನಗಳು ಮದುವಣಗಿತ್ತಿಯಂತೆ ರಸ್ತೆಯೆಲ್ಲೆಡೆ ಓಡಾಡುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿರುತ್ತದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment