1992 ಡಿಸೆಂಬರ್ 6 ರಂದು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದ್ದ ಆರೋಪ ಹೊತ್ತಿದ್ದ ಸೇವಕರಾದ ಎಲ್.ಕೆ. ಅಡ್ವಾಣಿ, ಉಮಾಭಾರತಿ, ಮುರಳಿ ಮನೋಹರ ಜೋಷಿ ಅವರ ಮೇಲೆ 28 ವರ್ಷಗಳಿಂದ ವಿಚಾರಣೆ ನಡೆಸಿ ಇಂದು ಸಿಬಿಐ ಕೋರ್ಟ್ನ ನ್ಯಾಯಧೀಶ ಎಸ್.ಕೆ. ಯಾದವ್ ಪ್ರಕರಣದ ತೀರ್ಪು ನೀಡಿ, ಬಿಜೆಪಿಯ ಭೀಷ್ಮ ಎಲ್.ಕೆ. ಅಡ್ವಾಣಿ ಸೇರಿದಂತೆ ಎಲ್ಲ ಆರೋಪಿಗಳನ್ನೂ ಖುಲಾಸೆಗೊಳಿಸಿದ್ದಾರೆ.
ಸುಮಾರು 351 ಸಾಕ್ಷಿ, 600 ಸಾಕ್ಷ್ಯ ಚಿತ್ರಗಳನ್ನು ಪರಿಶೀಲನೆ ಮಾಡಿ, ಎರಡೂ ಕಡೆಯ ವಾದಗಳನ್ನು ಆಲಿಸಿ, ಅವಲೋಕನೆ ಮಾಡಿ ಇಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಸೆಪ್ಟೆಂಬರ್ 16 ರಂದು ಎಸ್.ಕೆ. ಯಾದವ್ ಸೆ 30 ರಂದು ತೀರ್ಪು ಪ್ರಕಟಿಸುವದಾಗಿ ಹೇಳಿದ್ದರು.
ಮೊಘಲರ ದೊರೆ ಬಾಬರನ ಆಡಳಿತದಲ್ಲಿ ಅಯೋಧ್ಯೆಯಲ್ಲಿದ್ದ ರಾಮಮಂದಿರ ಕೆಡವಿ ಬಾಬರೀ ಮಸೀದಿ ಕಟ್ಟಿದ್ದಾರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ನ ಸದಸ್ಯರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ಇನ್ನೂ 44 ಮಂದಿ, ಅಯೋಧ್ಯೆಯ ಬಾಬರೀ ಮಸೀದಿಯ ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿರುವಾಗಲೇ 1992 ಡಿಸೆಂಬರ್ 6 ರಂದು ಮಸೀದಿಯನ್ನು ಕೆಡವಿದ್ದ ಕಾರಣಕ್ಕೆ 48 ಜನದ ಮೇಲೆ ದೂರು ದಾಖಲಾಗಿತ್ತು. 48 ಜನದಲ್ಲಿ ಈಗಾಗಲೇ 17 ಜನ ಮೃತಪಟ್ಟಿದ್ದಾರೆ.
ಪ್ರಕರಣದ ತೀರ್ಪಿನಿಂದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಷಿ, ಕಲ್ಯಾಣ ಸಿಂಗ್, ಉಮಾ ಭಾರತಿ ಸೇರಿ 31 ಆರೋಪಿಗಳಿಗೆ ಬಿಡುಗಡೆ ಸಿಕ್ಕಿದೆ. ಬಿಜೆಪಿ ಪಾಳಯದಲ್ಲಿ ಸಂತಸ ಮನೆ ಮಾಡಿದೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
This website uses cookies.
Leave a Comment