January 28, 2026

Newsnap Kannada

The World at your finger tips!

bagina

ಸಿಎಂ ಸಿದ್ದರಾಮಯ್ಯ ರಿಂದ KRS ಜಲಾಶಯಕ್ಕೆ ಬಾಗಿನ ಅರ್ಪಣೆ

Spread the love

ಮಂಡ್ಯ – ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.

KRS ಗೆ ಆಗಮಿಸಿದ ಸಿಎಂ  ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಜಲಾಶಯಕ್ಕೆ ಬಾಗೀನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಕೆ ಮಾಡಿದರು. ವೈದಿಕ ಬಾನು ಪ್ರಕಾಶ್ ಶರ್ಮಾರಿಂದ ಪೂಜಾ ಕಾರ್ಯ ನೆರವೇರಿತು. ಜಲಾಶಯಕ್ಕೆ ಕ್ಷೀರಾಭಿಷೇಕ ಪುಷ್ಪಾರ್ಚನೆ ಮಾಡಲಾಯಿತು. BBMP ಕಸದ ಲಾರಿ ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು

ಮೈದುಂಬಿ ಹರಿಯುತ್ತಿರುವ ಕಾವೇರಿ ಮಾತೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಈ ವೇಳೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರಾದ ಹೆಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!