January 29, 2026

Newsnap Kannada

The World at your finger tips!

bajarag dala

ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಭಜರಂಗದಳ – ಇಂದು ರಾಜ್ಯಾದ್ಯಂತ ʼಹನುಮಾನ್ ಚಾಲೀಸಾ ಪಠಣ

Spread the love

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ವಿಚಾರ ಪ್ರಸ್ತಾಪಿಸಿದಕ್ಕೆ ಹಿಂದೂ ಸಂಘಟನೆ ಸಿಡಿದೆದ್ದಿದ್ದು, ರಾಜ್ಯಾದ್ಯಂತ ಆಂಜನೇಯ ದೇವಸ್ಥಾನಗಳಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಆಯೋಜಿಸಿದೆ.

ಬಜರಂಗದಳವನ್ನು ನಿಷೇಧಿಸುವ ವಿಚಾರವೂ ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ . ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಳ್ಳುವ ಮೂಲಕ ಪ್ರಕಟಣೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಲಾಗಿದೆ.

ಈ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಲು ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ, ಬಜರಂಗ ದಳ ಸಂಜೆ 7 ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. 

error: Content is protected !!