ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಭಜರಂಗದಳ – ಇಂದು ರಾಜ್ಯಾದ್ಯಂತ ʼಹನುಮಾನ್ ಚಾಲೀಸಾ ಪಠಣ

Team Newsnap
1 Min Read

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ವಿಚಾರ ಪ್ರಸ್ತಾಪಿಸಿದಕ್ಕೆ ಹಿಂದೂ ಸಂಘಟನೆ ಸಿಡಿದೆದ್ದಿದ್ದು, ರಾಜ್ಯಾದ್ಯಂತ ಆಂಜನೇಯ ದೇವಸ್ಥಾನಗಳಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಆಯೋಜಿಸಿದೆ.

ಬಜರಂಗದಳವನ್ನು ನಿಷೇಧಿಸುವ ವಿಚಾರವೂ ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ . ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಳ್ಳುವ ಮೂಲಕ ಪ್ರಕಟಣೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಲಾಗಿದೆ.

ಈ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಲು ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ, ಬಜರಂಗ ದಳ ಸಂಜೆ 7 ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ. 

Share This Article
Leave a comment