education

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ : ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ

ಬೆಂಗಳೂರು : ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ.

ದಿನೇ ದಿನೇ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಉಪಯೋಗ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ.

ವಿದ್ಯಾರ್ಥಿಗಳು ಕ್ಲಾಸಿನಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ.

ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ವ್ಯಕ್ತವಾಗಿದ್ದು ,ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ (1 ರಿಂದ 10ನೇ ತರಗತಿ ಹಾಗೂ ಪ್ರಥಮ & ದ್ವಿತೀಯ ಪಿಯುಸಿ) ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರತಿಯೊಂದು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ, ಮೊಬೈಲ್‌ನ್ನು ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಉಪಯೋಗಿಸುವುದನ್ನು ನಿಷೇದಿಸಲಾಗಿದೆ.

ಶಾಲಾ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರು ಹಾಗೂ ಯಾವುದೇ ಸಿಬ್ಬಂದಿ ವರ್ಗದವರು ಕೂಡಾ ಶಾಲಾವಧಿಯಲ್ಲಿ, ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಲಾಗಿದೆ.

ಷೇಧವನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು, ಶಿಕ್ಷಕರು-ಉಪನ್ಯಾಸಕರು ಹಾಗೂ ಸಿಬ್ಬಂದಿಯವರು ಶಾಲಾವಧಿಯಲ್ಲಿ, ಶಾಲಾ ಆವರಣದಲ್ಲಿ ಮೊಬೈಲ್ ಬಳಸಿದಲ್ಲಿ ಅಂತಹ ಮೊಬೈಲ್‌ಗಳನ್ನು ಮುಟ್ಟುಗೋಲು ಹಾಕಿಕೊಳ್ಳತಕ್ಕದ್ದು .ಬಿಜೆಪಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ : ಆರ್.ಅಶೋಕ್ ಸೇರಿದಂತೆ ಹಲವು ನಾಯಕರು ಪೊಲೀಸ್ ವಶಕ್ಕೆ

ಈ ನಿಷೇದವನ್ನು ಅನುಷ್ಠಾನಗೊಳಿಸಲು ಅನುಷ್ಠಾನ ಸಮಿತಿಯನ್ನು ರಚಿಸಿ, ಅವುಗಳ ಜವಾಬ್ದಾರಿ/ಅಧಿಕಾರ ವ್ಯಾಪ್ತಿ ನಿಗಧಿಪಡಿಸಿದೆ.

Team Newsnap
Leave a Comment

Recent Posts

ನಾನೇ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ, ಅಧಿಕೃತ ಘೋಷಣೆ ಅಷ್ಟೇ ಬಾಕಿ : ಸಿ.ಪಿ.ಯೋಗೇಶ್ವರ್

ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ , ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ , ನಾನು ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ… Read More

July 5, 2024

KRS ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ

ಮಂಡ್ಯ :ಜಿಲ್ಲೆಯ ಪಾಂಡವಪುರ ತಾಲೂಕಿನ ವಿವಾದಿತ ಬೇಬಿಬೆಟ್ಟದಲ್ಲಿ ಐದು ಕಡೆಗಳಲ್ಲಿ ಕುಳಿಗಳನ್ನು ಕೊರೆದು ಇನ್ನು ಎರಡು ಮೂರು ದಿನಗಳಲ್ಲಿ ಪರಿಕ್ಷಾರ್ಥ… Read More

July 5, 2024

ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಎರಡು ವರ್ಷಗಳ… Read More

July 5, 2024

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ… Read More

July 5, 2024

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024