Karnataka

ಕೆಆರ್‌ಎಸ್‌ನ 30 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ: ಹೈಕೋರ್ಟ್‌ ತೀರ್ಪು

ಬೆಂಗಳೂರು: ರಾಜ್ಯದ ಜೀವನಾಡಿ ಕಾವೇರಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಆರ್‌ಎಸ್‌ ಅಣೆಕಟ್ಟೆಯ ಸುತ್ತ 30 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದ್ದು, ಕೆಆರ್‌ಎಸ್ ಸುತ್ತ 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸುವಂತಿಲ್ಲ. ಸರ್ಕಾರ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ. ಹೀಗಾಗಿ ಯಾವುದೇ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ನ್ಯಾಯಾಲಯ ಹೇಳಿದೆ.

ಜಿಲ್ಲಾಧಿಕಾರಿ ಪರವಾನಿಗೆ ನೀಡಲು ಷರತ್ತು ವಿಧಿಸಿದ್ದಾರೆ ಎಂದು ಕೆಲ ಗಣಿ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು.

ಅಣೆಕಟ್ಟಿಗೆ ಐತಿಹಾಸಿಕ ಮೌಲ್ಯವಿದೆ. ಮೈಸೂರು ಮಹಾರಾಜರು, ಸರ್ ಎಂ. ವಿಶ್ವೇಶ್ವರಯ್ಯರ ಕೊಡುಗೆ ಬಹಳಷ್ಟಿದೆ. ಅಣೆಕಟ್ಟೆ ಬಳಿ ಹಲವು ಬಾರಿ ಸ್ಫೋಟಕಗಳನ್ನು ಸಿಡಿಸಲಾಗುತ್ತಿದೆ. ಅಲ್ಲಿ ಗಣಿಗಾರಿಕೆ ನಡೆಸಿದರೆ ಗಂಭೀರ ಪರಿಣಾಮ ಎದುರಾಗಲಿದೆ ಎಂದು ನ್ಯಾಯಾಲಯ ಹೇಳಿದೆ.

ಇನ್ನು ಕೆಆರ್ ಎಸ್ ಗೆ ತೊಂದರೆಯಾದರೆ ಆಗುವ ಅನಾಹುತಗಳ ಬಗ್ಗೆ ಅರಿವಿದೆಯೇ? ಒಂದು ವೇಳೆ ಅನಾಹುತವಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಕೃಷ್ಣರಾಜಸಾಗರ ಅಣೆಕಟ್ಟು ನಿರ್ಮಾಣಕ್ಕೆ ಜನರು ರಕ್ತ, ಬೆವರು ಹರಿಸಿದ್ದಾರೆ. ಅದಕ್ಕೆ ಧಕ್ಕೆಯಾಗುವ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ. ಮೂರು ರಾಜ್ಯಗಳು ಕಾವೇರಿ ನೀರಿಗಾಗಿ ಹೋರಾಡುತ್ತಿವೆ. ಆದರೆ ಕೆಆರ್​ಎಸ್ ಅಣೆಕಟ್ಟೆ ಸಂರಕ್ಷಣೆಗೆ ಪ್ರಯತ್ನಿಸುತ್ತಿಲ್ಲ. ಅಣೆಕಟ್ಟೆಗೆ ತೊಂದರೆಯಾದರೆ ಇಡೀ ರಾಜ್ಯಕ್ಕೇ ಗಂಭೀರ ಆಪತ್ತು ಬರಲಿದೆ. ಹೀಗಾಗಿ ಅಣೆಕಟ್ಟೆ ಬಳಿ ಗಣಿಗಾರಿಕೆಗೆ ನಿರ್ಬಂಧ ವಿಧಿಸುವುದು ಅನಿವಾರ್ಯಎಂದು ನ್ಯಾಯಪೀಠ ಹೇಳಿದೆ.ಸುಮಲತಾ ನನ್ನ ಶತ್ರುನಾ ? ಭೇಟಿಯಾದರೆ ತಪ್ಪೇನು? ಎಚ್ ಡಿಕೆ ಪ್ರಶ್ನೆ

ಸರ್ಕಾರಕ್ಕೆ ವರದಿ:

ಕೃಷ್ಣರಾಜಸಾಗರ ಅಣೆಕಟ್ಟೆಯ 25 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಗಣಿ ಚಟುವಟಿಕೆಗಳನ್ನು ನಿಷೇಧಿಸುವಂತೆ ಅಣೆಕಟ್ಟು ಸುರಕ್ಷತಾ ಪುನರ್ ಪರಿಶೀಲನಾ ಸಮಿತಿ 2021ರ ಡಿಸೆಂಬರ್‌ನಲ್ಲಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿತ್ತು.

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024