ಮಾಗಡಿ ತಾಲೂಕಿನ ಬಂಡೆ ಮಠದ ಬಸವಲಿಂಗ ಸ್ವಾಮಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಯುವತಿ ನೀಲಾಂಬಿಕೆ (21) ನಯವಾದ ಮಾತುಗಳಿಗೆ ವಿಡಿಯೋ ಕಾಲ್ ನಲ್ಲಿ ಸ್ವಾಮಿಯನ್ನೇ ನಗ್ನ ಮಾಡಿಸಿದ ಆ ಯುವತಿ ಎಂಜಿನಿಯರಿಂಗ್ ಓದುತ್ತಿದ್ದಾಳೆ.
ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕಾ ಅಲಿಯಾಸ್ ಚಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ. ರಜೆಯಲ್ಲಿ ತುಮಕೂರಿನಲ್ಲಿರುವ ಅಜ್ಜಿಯ ಮನೆಗೆ ಬರುತ್ತಿದ್ದಳು. ಈ ಸಂದರ್ಭದಲ್ಲಿ ಕಣ್ಣೂರು ಮೃತ್ಯಂಜಯ ಶ್ರೀಗಳ ಸಂಪರ್ಕಕ್ಕೆ ಯುವತಿ ಬಂದಿದ್ದಾಳೆ.ಮನೆಯಲ್ಲಿ ಭಗತ್ ಸಿಂಗ್ ಪಾತ್ರದ ಅಭ್ಯಾಸ – ನೇಣಿಗೆ ಕೊರಳು, ಬಾಲಕ ಸಾವು – ಚಿತ್ರದುರ್ಗದಲ್ಲಿ ದುರಂತ
ಈಕೆ ತಾನು ಹೇಳಿದಂತೆ ಕೇಳುತ್ತಾಳೆ ಎನ್ನುವುದು ತಿಳಿಯುತ್ತಿದ್ದಂತೆ ಬಂಡೇ ಮಠದ ಸ್ವಾಮಿಯನ್ನು ಸಿಕ್ಕಿ ಹಾಕಿಸಲು ಕಣ್ಣೂರು ತಂತ್ರ ಹೂಡಿದ್ದಾರೆ. ಇದಾದ ಬಳಿಕ ಯುವತಿ ಬಂಡೇ ಮಠದ ಸ್ವಾಮಿಗಳ ಪರಿಚಯ ಮಾಡಿಕೊಂಡಿದ್ದಾಳೆ.
ಸಲುಗೆ ಜಾಸ್ತಿ ಆಗುತ್ತಿದ್ದಂತೆ ಬಂಡೇ ಮಠದ ಸ್ವಾಮಿಯನ್ನು ತನ್ನ ತಾಳಕ್ಕೆ ತಕ್ಕಂತೆ ನೀಲಾಂಬಿಕಾ ಕುಣಿಸಿದ್ದಾಳೆ. ವೀಡಿಯೋ ಚಾಟ್ ಆರಂಭಿಸಿದ್ದು ಅಲ್ಲದೇ ಚಾಟಿಂಗ್ ವೇಳೆ ನಗ್ನವಾಗುವಂತೆ ಹೇಳಿದ್ದಾಳೆ. ಆಕೆಯ ವೈಯ್ಯಾರದ ಮಾತಿಗೆ ಮರುಳಾದ ಸ್ವಾಮಿನಗ್ನವಾಗಿದ್ದಾರೆ. ಈ ಸಂದರ್ಭದಲ್ಲಿ ವೀಡಿಯೋ ಕರೆಗಳನ್ನು ಆಕೆ ರೆಕಾರ್ಡ್ ಮಾಡುತ್ತಿದ್ದಳು.
ಆ ವೀಡಿಯೋ ಚಾಟಿಂಗ್ ರೆಕಾರ್ಡ್ ಅನ್ನು ಯುವತಿ ಮಹಾದೇವಯ್ಯನಿಗೆ ನೀಡುತ್ತಾಳೆ. ಮಹಾದೇವಯ್ಯ ಆ ವೀಡಿಯೋವನ್ನು ಸಿಡಿ ಮಾಡಿ ಮುಖಂಡರಿಗೆ ಹಂಚಿದ್ದ ವಿಚಾರ ಈಗ ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
- ಇಂದು ರಾಜಧಾನಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
More Stories
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ