Karnataka

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ – ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ಗಡ್ಕರಿ

ಬೆಂಗಳೂರಿನಿಂದ ಮೈಸೂರಿಗೆ 90 ನಿಮಿಷದಲ್ಲಿ ಪ್ರಯಾಣಿಸಬಹುದಾದ ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಅಂತಿಮ ಹಂತದ ಕಾಮಗಾರಿ ನಡೆಯುತ್ತಿದೆ. ಇಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವೈಮಾನಿಕ ಸಮೀಕ್ಷೆ  ನಡೆಸಿದರು.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಭಾಗಶಃ ಪೂರ್ಣ ಹಿನ್ನೆಲೆ ಇಂದು ನಿತಿನ್ ಗಡ್ಕರಿ ಹೆದ್ದಾರಿ ಪರಿಶೀಲನೆ ನಡೆಸಿದರು. ಬೆಂಗಳೂರಿನಿಂದ-ಶ್ರೀರಂಗಪಟ್ಟಣದವರೆಗೆ ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಈ ವೇಳೆ ನಿತಿನ್ ಗಡ್ಕರಿಗೆ ಸಂಸದ ಬಿ.ಎನ್.ಬಚ್ಚೇಗೌಡ, ಸಚಿವ ಸಿ.ಸಿ ಪಾಟೀಲ್ ಸೇರಿದಂತೆ ಕೆಲ ಸಚಿವರು ಸಾಥ್ ನೀಡಿದ್ದರು.ವಿಧಾನಸೌಧದಲ್ಲಿ ಮಂಡ್ಯದ ವ್ಯಕ್ತಿಯ 10.5 ಲಕ್ಷ ಹಣ ವಶ : PWD ಇಂಜಿನಿಯರ್ ಬಂಧನ

ರಾಜ್ಯ ರಾಜಧಾನಿ ಹಾಗೂ ಸಾಂಸ್ಕೃತಿಕ ನಗರಿಗೆ ಸಂಪರ್ಕ ಕಲ್ಪಿಸುವ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಇನ್ನೆನ್ನು ಪೂರ್ಣಗೊಳ್ಳುವ ಹಂತ ತಲುಪಿದೆ. ಒಟ್ಟು 118 ಕಿ.ಮೀ ಉದ್ದದ್ದ ಎಕ್ಸ್‌ಪ್ರೆಸ್‌ ವೇ ಮೊದಲ ಹಂತದ ಕಾಮಗಾರಿಯು ಬೆಂಗಳೂರಿನ ಪಂಚಮುಖಿ ಆಂಜನೇಯ ದೇವಾಲಯದಿಂದ ಹಿಡಿದು ನಿಡಘಟ್ಟದವರೆಗೆ ಹಾಗೂ ನಿಡಘಟ್ಟದಿಂದ ಮೈಸೂರಿನ ವರೆಗೂ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ.

ಇದೇ ಫೆಬ್ರವರಿ ಇಲ್ಲವೇ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆದ್ದಾರಿಗೆ ಚಾಲನೆ ನೀಡಲಿದ್ದಾರೆ. ಒಟ್ಟು 9,551 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ದಶಪಥ ಹೆದ್ದಾರಿ 9 ಬೃಹತ್ ಸೇತುವೆ, 44 ಸಣ್ಣ ಸೇತುವೆ, 8.7 ಕಿ.ಮೀ. ಉದ್ದದ ಎಲಿ ವೇಟೆಡ್ ಹೈವೇ ಹೊಂದಿದೆ. 4 ರೈಲ್ವೆ ಮೇಲ್ಸೇತುವೆ, 28 ವೆಹಿಕಲ್ ಅಂಡರ್‍ಪಾಸ್, 13 ಪಾದಚಾರಿಗಳ ಅಂಡರ್ ಪಾಸ್‍ಗಳನ್ನ ಒಳಗೊಂಡಿದೆ.

ಈ ಯೋಜನೆ ಪೂರ್ಣಗೊಂಡರೆ ಮೈಸೂರು-ಬೆಂಗಳೂರು ಪ್ರಯಾಣದ ಅವಧಿ 90 ನಿಮಿಷಕ್ಕೆ ಇಳಿಕೆಯಾಗಲಿದೆ. ಜೊತೆಗೆ ಮಧ್ಯೆ ಸಿಗುವ ಹಲವು ಪಟ್ಟಣಗಳಿಗೆ ಬೈಪಾಸ್ ವ್ಯವಸ್ಥೆ ಕಲ್ಪಿಸಿ ಎಂಟ್ರಿ ಹಾಗೂ ಎಕ್ಸಿಟ್‍ಗಳನ್ನು ನೀಡಲಾಗಿದೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024