Categories: Main News

ಮಗು ಕದ್ದ ಮನೋ ವೈದ್ಯೆಯನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಒಂದು ವರ್ಷದ ಹಿಂದೆ ಚಾಮರಾಜಪೇಟೆಯ ಬಿಬಿಎಂಪಿ ಹೆರಿಗೆ ಆಸ್ಪತ್ರೆಯಿಂದ ಮಗು ಕಳ್ಳತನ ಮಾಡಿದ್ದ ಮನೋ ವೈದ್ಯೆಯೊಬ್ಬ ರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.‌

ವೈದ್ಯೆ ರಶ್ಮಿ ಆಸ್ಪತ್ರೆಗೆ ಆಟೋವೊಂದರಲ್ಲಿ ಬಂದು ಮಗುವನ್ನು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಳು. ಇದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯ ರೇಖಾಚಿತ್ರವನ್ನು ಬಳಸಿ ಪೊಲೀಸರು ಸತತ ಒಂದು ವರ್ಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಆರೋಪಿ ಮಗುವನ್ನ ಕೊಪ್ಪಳ ಮೂಲದ ದಂಪತಿಗೆ ನೀಡಿದ್ದಳು. ಸದ್ಯ ಮಗುವನ್ನ ರಕ್ಷಿಸಲಾಗಿದೆ.

15 ಲಕ್ಷ ಪಡೆದು ದಂಪತಿಗೂ ವಂಚಿಸಿದ ಈ ಲೇಡಿ ಡಾಕ್ಟರ್ 2014 ರ ಸಮಯದಲ್ಲಿ ಹುಬ್ಬಳ್ಳಿಯ ಎಸ್​ಡಿಎಂ ಆಸ್ಪತ್ರೆಯಲ್ಲಿ ರಶ್ಮಿ ವೈದ್ಯೆಯಾಗಿ ಕೆಲಸ ಮಾಡ್ಡಿದ್ದಳು.

ಈ ವೇಳೆ ಕೊಪ್ಪಳ ಮೂಲದ ದಂಪತಿಯ ಪರಿಚಯವಾಗಿತ್ತು. ಈ ದಂಪತಿ ಬಳಿ ಓರ್ವ ವಿಶೇಷ ಚೇತನ ಮಗುವಿತ್ತು. ಹೀಗಾಗಿ ಆ ಮಗುವನ್ನ ರಶ್ಮಿ ಬಳಿ ಚಿಕಿತ್ಸೆಗಾಗಿ ಕರೆತರುತ್ತಿದ್ದರಂತೆ. ಈ ವೇಳೆ ದಂಪತಿಯನ್ನು ಪರಿಚಯ ಮಾಡಿಕೊಂಡಿದ್ದ ರಶ್ಮಿ ನಿಮಗೆ ನಿಮ್ಮ ಮಗುವೇ ಜನಿಸುತ್ತೆ ಎಂದು ದಂಪತಿಯಿಂದ ಅಂಡಾಣು ಮತ್ತು ವೀರ್ಯಾಣು ಪಡೆದು ಶೇಖರಿಸಿಟ್ಟಿದ್ದಳು.

ಈ ಅಂಡಾಣು ಮತ್ತು ವೀರ್ಯಾಣು ಬೇರೊಬ್ಬ ಮಹಿಳೆಯ ಗರ್ಭ ಸೇರಲಿದೆ. ಆ ಮೂಲಕ ನಿಮ್ಮ ಮಗು ಬೇರೊಂದು ಮಹಿಳೆಯ ಗರ್ಭದಲ್ಲಿ ಬೆಳೆಯಲಿದೆ ಎಂದು ಹೇಳಿದ್ದಳು.

2019 ರಲ್ಲಿ ವೈದ್ಯ ದಂಪತಿಯಿಂದ ಮುಂಗಡ ಹಣ ಪಡೆದಿದ್ದಳು. ಆದರೆ ತಾನು ಶೇಖರಿಸಿದ ಅಂಡಾಣು, ವೀರ್ಯಾಣುವನ್ನು ರಶ್ಮಿ ಎಲ್ಲಿಯೂ ಬಳಸಲೇ ಇಲ್ಲ. ಕೊನೆಗೆ 2020 ರ ಮೇ 29 ರಂದು ಚಾಮರಾಜಪೇಟೆ ಹೆರಿಗೆ ಆಸ್ಪತ್ರೆಯಿಂದ ಮಗುವನ್ನು ಕದ್ದು ದಂಪತಿಯಿಂದ ಹಣ ಪಡೆದು ಮಗು ನೀಡಿದ್ದಳು.

ಆ ದಂಪತಿ ಕಳೆದೊಂದು ವರ್ಷ ದಿಂದ ತಮ್ಮದೇ ಮಗು ಎಂದು ಬೇರೊಬ್ಬ ತಾಯಿಯ ಮಗುವನ್ನು ಸಾಕುತ್ತಿದ್ದರು ಎನ್ನಲಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024