ಬೆಂಗಳೂರು ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು 20 ದಿನಗಳ ಬಳಿಕ ಚೆನ್ನೈನಲ್ಲಿ ಪತ್ತೆಯಾದ ಪ್ರಕರಣದಲ್ಲಿ ಹೊಸ ತಿರುವು ಕಂಡಿದೆ. ಮೂವರ ಪೈಕಿ ಇಬ್ಬರು ಬಾಲಕಿಯರು ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರೆಂಬ ಸಂಗತಿ ವಿಚಾರಣೆಯಲ್ಲಿ ಗೊತ್ತಾಗಿದೆ.
ಮತ್ತೊಬ್ಬ ಬಾಲಕಿಗೆ ಮಲತಾಯಿಯ ಮಕ್ಕಳಿಂದ ಕೊಲೆ ಬೆದರಿಕೆ ಬಂದಿತ್ತು ಅಷ್ಟೇ ಅಲ್ಲ,ಜ್ಯೋತಿಷಿಯೊಬ್ಬ ನೀನು ಕೊಲೆ ಆಗುತ್ತೀಯಾ ಎಂದು ಭವಿಷ್ಯ ನುಡಿದಿದ್ದ ಎಂಬ ಆಘಾತಕಾರಿ ವಿಚಾರವೂ ಗೊತ್ತಾಗಿದೆ.
ಪೂರ್ವ ವಲಯದ ಖಾಸಗಿ ಶಾಲೆಯಲ್ಲಿ ಮೂವರು ವಿದ್ಯಾಥಿರ್ನಿಯರು 9 ಮತ್ತು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಶಾಲಾ ಹಾಸ್ಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರೆ ಮತ್ತೊಬ್ಬ ಬಾಲಕಿ ಮನೆಯಿಂದಲೇ ಶಾಲೆಗೆ ಬಂದು ಹೋಗುತ್ತಿದ್ದಳು. ಒಬ್ಬಾಕೆಗೆ ತಂದೆ-ತಾಯಿ ಇರಲಿಲ್ಲ. 9ನೇ ತರಗತಿ ಓದುತ್ತಿದ್ದ ಮತ್ತೊರ್ವ ಬಾಲಕಿಗೆ ತಾಯಿ ಇರಲಿಲ್ಲ. ತಂದೆ ಇದ್ದು, ಆತ 2ನೇ ಮದುವೆಯಾಗಿದ್ದ. ಪಾಲಕರ ಜತೆ ನೆಲೆಸಿದ್ದ ಬಾಲಕಿಗೆ ತಾಯಿ ಪ್ರೀತಿ ತೋರಿಸಿದರೆ, ತಂದೆ ಹೆಚ್ಚು ಶಿಸ್ತು ಜೀವನ ನಡೆಸುವಂತೆ ಒತ್ತಡ ಹೇರುತ್ತಿದ್ದರು.
ಮೂವರು ಒಂದಿಲ್ಲೊಂದು ಕಾರಣಕ್ಕೆ ಮಾನಸಿಕ ಹಿಂಸೆಗೆ ಒಳಗಾಗಿದ್ದರು, ಇವರಲ್ಲಿಯೇ ಪರಸ್ಪರ ಸ್ನೇಹ ಬೆಳೆದು ಮನೆಯಿಂದ ದೂರ ಇರಲು ನಿರ್ಧರಿಸಿದ್ದರು. ಅದಕ್ಕಾಗಿ ಬಾಲಕಿಯರು ಮನೆಯಲ್ಲಿ ಕಷ್ಟವಿದೆ ಎಂದು ಸ್ನೇಹಿತೆಯರು ಮತ್ತು ಪರಿಚಯಸ್ಥರಿಂದ 30 ಸಾವಿರ ರು ಸಂಗ್ರಹಿಸಿ ವ್ಯವಸ್ಥಿತ ಸಂಚಿನಂತೆ ಸೆ.6ರ ಮಧ್ಯಾಹ್ನ ಹಾಸ್ಟೆಲ್ ವಾರ್ಡನ್ ಮತ್ತು ಸೆಕ್ಯೂರಿಟಿ ಕಣ್ತಪ್ಪಿಸಿ ಲಗೇಜ್ ಸಮೇತ ಪರಾರಿಯಾಗಿದ್ದರು.
ಮಾರ್ಗ ಮಧ್ಯೆ ಮತ್ತೋರ್ವ ಬಾಲಕಿ ಕೂಡಿಕೊಂಡು ಆಟೋದಲ್ಲಿ ಫಾಲಸೇವಾನಗರಕ್ಕೆ ತೆರಳಿದ್ದರು. ಅಂಗಡಿಯಲ್ಲಿ ಬಟ್ಟೆ ಖರೀದಿಸಿ ಕಂಟ್ಮೋನೆಂಟ್ ರೈಲು ನಿಲ್ದಾಣ ಮಾರ್ಗವಾಗಿ ವೆಲಾಂಗಣಿ ತೆರಳಲು ನಿರ್ಧರಿಸಿದ್ದರು. ಗೊತ್ತಾಗದೆ ಚೆನ್ನೈ ರೈಲು ಹತ್ತಿ ಸೆ.7ರಂದು ಇಳಿದಿದ್ದಾರೆ. ಚೆನ್ನೈ ರೈಲು ನಿಲ್ದಾಣದಲ್ಲಿ ಸಂಜೆವರೆಗೂ ಕಾಲ ಕಳೆದಿದ್ದಾರೆ.
ಸಂಶಯವಾಗಿ ಓಡಾಡುತ್ತಿದ್ದ ಬಾಲಕಿಯರನ್ನು ಕಂಡ ರೈಲ್ವೆ ಪೊಲೀಸರು ಪ್ರಶ್ನಿಸಿದಾಗ ಬಾಲಕಿಯರು ಬೆಂಗಳೂರಿಗೆ ಹೋಗಬೇಕು ಎಂದು ಹೇಳಿದಾಗ ಪೊಲೀಸರು ಬೆಂಗಳೂರು ರೈಲು ಹತ್ತಿಸಿದ್ದಾರೆ. ನವರಾತ್ರಿಯಲ್ಲಿ ದೇವಿಯ ಒಂಬತ್ತು ಅವತಾರಗಳು
ಕಂಟ್ಮೋನೆಂಟ್ ರೈಲು ನಿಲ್ದಾಣಕ್ಕೆ ಬಂದ ಬಾಲಕಿಯರು ಪೊಲೀಸರು ಕಾಣೆಯಾಗಿರುವ ತಮ್ಮ ಭಾವಚಿತ್ರಗಳನ್ನು ಅಂಟಿಸಿದ್ದ ಪ್ರಕಟಣೆ ಗಮನಿಸಿ ವಾಪಸ್ ಚೆನ್ನೈಗೆ ತೆರಳಲು ನಿರ್ಧರಿಸಿ ಗೊತ್ತಾಗದೆ ದೆಹಲಿ ರೈಲಿಗೆ ಹತ್ತಿದ್ದಾರೆ. ಮಾರ್ಗಮಧ್ಯೆ ಮಾರ್ಗ ಬದಲಾಯಿಸಿ ಚೆನ್ನೈಗೆ ಹೋಗಿದ್ದಾರೆ. ಬ್ಯಾಗ್ನಿಂದ ಹಣ ತೆಗೆಯುತ್ತಿದ್ದ ದೃಶ್ಯ ನೋಡಿದ ಕಳ್ಳರು, ಹಣ ಸಮೇತ ಬ್ಯಾಗ್ ಕಳವು ಮಾಡಿದ್ದರು. ಚೆನ್ನೈನಲ್ಲಿ ಹಣ ಇಲ್ಲದೆ ಕಂಗಾಲಾಗಿದ್ದ ಬಾಲಕಿಯರನ್ನು ಕರೆದು ಆಟೋ ಚಾಲಕ ಪ್ರಶ್ನಿಸಿದ್ದ. ಅದಕ್ಕೆ ತಮಿಳು ಬಲ್ಲ ವಿದ್ಯಾಥಿರ್ನಿಯರು ‘ಅನಾಥರು. ಹಾಸ್ಟೆಲ್ನಲ್ಲಿ ಹಿಂಸೆ ಕೊಡುತ್ತಿದ್ದರು. ಅದಕ್ಕೆ ಹೊರಗೆ ಬಂದಿದ್ದೇವೆ’ ಎಂದು ಅಳಲು ತೋಡಿಕೊಂಡಿದ್ದರು. ಆಟೋ ಚಾಲಕ, ಹೆಣ್ಣು ಮಕ್ಕಳನ್ನು ಚರ್ಚ್ ನಡೆಸುತ್ತಿದ್ದ ಅನಾಥಾಲಯಕ್ಕೆ ಸೇರಿಸಿ ಮಿಕ್ಸಿ ತಯಾರಿಸುವ ಘಟಕಕ್ಕೆ ಕೆಲಸಕ್ಕೆ ಸೇರಿಸಿದ್ದ.
ಸುಳಿವು ಕೊಟ್ಟ ಮಿಸ್ಡ್ ಕಾಲ್:
ಮೂವರು ಬಾಲಕಿಯರು ಒಂದು ಮೊಬೈಲ್ ಫೋನ್ ಖರೀದಿ ಮಾಡಿಕೊಂಡಿದ್ದರು. ಅದರಲ್ಲಿ ಒಬ್ಬಾಕೆ, ತಂದೆಗೆ ಮಿಸ್ಡ್ ಕಾಲ್ ಕೊಟ್ಟಿದ್ದಳು. ವಾಪಸ್ ತಂದೆ ಕರೆ ಮಾಡಿದಾಗ ಸ್ವೀಕರಿಸುತ್ತಿರಲಿಲ್ಲ. ಅನುಮಾನ ಬಂದು ಈ ವಿಷಯವನ್ನು ಪಾಲಕರು, ಪೊಲೀಸರಿಗೆ ತಿಳಿಸಿದ್ದರು. ಕರೆಯ ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ವಿದ್ಯಾರ್ಥಿನಿಯರು ಪತ್ತೆಯಾಗಿದ್ದಾರೆ. ಅವರನ್ನು ಬೆಂಗಳೂರಿಗೆ ಕರೆತಂದಿದ್ದಾರೆ.
ಪರಸ್ಪರ ಮದುವೆಗೆ ನಿರ್ಧಾರ:
ಹೆತ್ತವರ ಪ್ರೀತಿಯಿಂದ ವಂಚಿತರಾಗಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ ಇಬ್ಬರು ಪರಸ್ಪರ ಮದುವೆ ಆಗಲು ನಿರ್ಧರಿಸಿದ್ದರು. ಅಲ್ಲದೆ, ಬಡ ಹೆಣ್ಣು ಮಕ್ಕಳನ್ನು ಯಾರು ಪ್ರೀತಿಸುತ್ತಾರೆ? ಯಾರು ಮದುವೆ ಮಾಡುತ್ತಾರೆ? ಎಂದು ಮಾನಸಿಕವಾಗಿ ಕುಗ್ಗಿದ್ದರು. ಅದಕ್ಕಾಗಿ ಒಬ್ಬಾಕೆ, ಹುಡುಗನಂತೆ ಕೂದಲು ಕಟಿಂಗ್ ಮಾಡಿಸಿಕೊಂಡು ಪುರುಷರ ಉಡುಪು ಧರಿಸಿಕೊಳ್ಳುತ್ತಿದ್ದಳು. ಮತ್ತೋರ್ವ ಬಾಲಕಿ, ಆಕೆಯ ಪತ್ನಿಯ ರೀತಿ ನಡೆದುಕೊಳ್ಳುತ್ತಿದ್ದಳು ಎಂದು ಹೇಳಲಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment