ಮಂಡ್ಯ ( mandya ) ಜಿಲ್ಲೆಯ ಮೇಲುಕೋಟೆಯಲ್ಲಿ ಮತ್ತೆ ಪರಿಭಾಷಿಕ ಚಿತ್ರತಂಡವು ಪರಂಪರೆಗೆ ಧಕ್ಕೆಯಾಗುವ ರೀತಿಯಲ್ಲಿ ತೆಲುಗು ಚಿತ್ರತಂಡ ಸೆಟ್ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮೇಲುಕೋಟೆಯ ( Melkote ) ಪಾರಂಪರಿಕ ಸ್ಮಾರಕ ರಾಯಗೋಪುರದಲ್ಲಿ ಬಾರ್ ( Bar ) ರೀತಿಯ ಸೆಟ್ ಹಾಕುವ ಮೂಲಕ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ರಾಯಗೋಪುರದ ಮುಂಭಾಗ ಪಾರ್ಟಿಯ ಸೆಟ್ ಹಾಕಿ ವಿವಿಧ ಬ್ರ್ಯಾಂಡ್ಗಳ ಮದ್ಯದ ( Alcohol ) ಬಾಟಲ್ಗಳನಿಟ್ಟು ಚಿತ್ರೀಕರಣ ಮಾಡಿದೆ.ಇದನ್ನು ಓದಿ –ಭಾರತದಲ್ಲಿರುವಾಗಲೇ ಪುತ್ರಿಯನ್ನು ಕಳೆದುಕೊಂಡ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಮಿಲ್ಲರ್
ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬ ಬಳಕೆ ಮಾಡಲಾಗಿದ್ದು, ಇದರಿಂದ ರಾಯಗೋಪುರಕ್ಕೆ ಹಾನಿಯಾಗುತ್ತದೆ. ಹೀಗಾಗಿ ಚಿತ್ರದ ತಂಡದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2 ದಿನಗಳ ಚಿತ್ರಿಕರಣಕ್ಕೆ ಷರತ್ತು ಬದ್ಧ ಅನುಮತಿಯನ್ನು ಮಂಡ್ಯ ಡಿಸಿ ಅಶ್ವಥಿ ( DC Ashwati ) ಅವರು ನೀಡಿದರು. ಇದೀಗ ಆ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿ ರಾಯಗೋಪುರದಲ್ಲಿ ಬಾರ್ ಸೆಟ್ ಹಾಗಿದ್ದಕ್ಕೆ ಜನರು ಕಿಡಿಕಾರಿದ್ದಾರೆ.
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ