ಹನ್ನೆರಡನೆಯ ಶತಮಾನದಲ್ಲಿನಡೆದ ವಚನ ಚಳವಳಿಯ ಹರಿಕಾರರಲ್ಲಿ ಪ್ರಮುಖರಾದವರು ಬಸವಣ್ಣ. ಶರಣ,ವಚನಕಾರ,ಸಮಾಜ ಸುಧಾರಕ, ಧಾರ್ಮಿಕ ಮಹಾ ಕ್ರಾಂತಿಯ ನೇತಾರ, ಅಲ್ಲಮಪ್ರಭು, ಅಕ್ಕಮಹಾದೇವಿ, ಮಡಿವಾಳಮಾಚಯ್ಯ, ನೂಲಿನ ಚಂದಯ್ಯ ಮುಂತಾದ ಶಿವಶರಣರ ಕಾಲದಲ್ಲಿಯೇ ಜೀವಿಸಿದ್ದ ಜಗಜ್ಯೋತಿ ಬಸವಣ್ಣನವರ ಪ್ರಭಾವದ ಕಾರಣ ಆ ಕಾಲವನ್ನು ಬಸವಯುಗವೆಂದೇ ಕರೆಯುತ್ತಾರೆ.
ಬಿಜ್ಜಳನ ರಾಜ್ಯದ ಭಂಡಾರಿಯಾಗಿದ್ದ ಬಸವಣ್ಣ, ಭಕ್ತಿ ಭಂಡಾರಿಯೂ ಆಗಿದ್ದರು.ಕೂಡಲ ಸಂಗಮದೇವ ಇವರ ವಚನಗಳ ಅಂಕಿತ.ಬಿಜ್ಜಳನ ಅಂಧಶ್ರದ್ಧೆಯ ವಿರುದ್ಧ ಸಿಡಿದು ನಿಂತು ಅನುಭವ ಮಂಟಪ ನಿರ್ಮಿಸಿದರು.
ಕಾಯಕವೇ ಕೈಲಾಸ ಎಂದು ಸಾರಿ, ಪ್ರತಿಯೊಬ್ಬರಲ್ಲೂ ದುಡಿದು ತಿನ್ನುವ ಹುಮ್ಮಸ್ಸು ತುಂಬಿದರು. ‘ವಸುದೈವ ಕುಟುಂಬಕಂ’ ಎನ್ನುತ್ತಾ ಎಲ್ಲರಲ್ಲೂ ಸಹೋದರತ್ವದ ಸಂದೇಶ ಸಾರಿದರು.
ಬಸವ ಜಯಂತಿಯು ಲಿಂಗಾಯತರ ಹಾಗೂ ಸರ್ವಧರ್ಮೀಯರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.
ಅಕ್ಷಯ ತೃತೀಯದಂದೇ ಆಚರಣೆ ಏಕೆ?
ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯ ಆಚರಣೆ ಶುರು ಮಾಡಲು ನಿಶ್ಚಯಿಸಿದರು. ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕ ತಿಳಿಯದಿರುವುದು ದೊಡ್ಡ ಗೊಂದಲವಾಯಿತು. ಆಗ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ತಿಳಿಸಿದರು. ಅಂದಿನಿಂದಲೂ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.
ಬಸವಣ್ಣನವರ ವಚನಗಳು ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ಪ್ರಾಮುಖ್ಯತೆನ್ನು ನೀಡಿವೆ, ಮನುಷ್ಯರ ನಡುವಿನಲ್ಲಿ ಹೊಮ್ಮಬೇಕಾದ ಮಾನವೀಯತೆ, ಹೃದಯ ವೈಶಾಲ್ಯತೆ ಗೈರು ಹಾಜರಾದಾಗ ನಿಮ್ಮ ಭಕ್ತಿಗೆ ಅರ್ಥವಿರುವುದಿಲ್ಲ, ಮೂಲದಲ್ಲಿ ಸತ್ವವಿರದ ತೋರಿಕೆಯ ಭಕ್ತಿಯು ಮಂಗನ ಕೈಯೊಳಗೆ ಮಾಣಿಕ್ಯದಂತೆ , ಬೆಲೆ ತಿಳಿಯದೆ ಹೋದೀತು,ಎಂಬ ಸಂಗತಿಗಳನ್ನು ವಚನಗಳ ಮೂಲಕ ವಿವರಿಸಿದ್ದಾರೆ.
“ಇವನಾರವ, ಇವನಾರವ ಎಂದೆನ್ನದಿರಯ್ಯ ಇವ ನಮ್ಮವ, ಇವ ನಮ್ಮವ ಎಂದೆನ್ನಿರಯ್ಯ” ಎಂದು ಸಮಾಜದ ಎಲ್ಲ ವರ್ಗದ ಜನರನ್ನು ಒಂದು ಗೂಡಿಸಿದ ಬಸವಣ್ಣ, ಜಾತೀಯತೆಯ ವಿರುದ್ಧ ಸಮರ ಸಾರಿದರು.
ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ ಜಲವೊಂದೇ ಶೌಚಾ ಚಮನಕ್ಕೆ ! ಕುಲವೊಂದೇ ತನ್ನ ತಾನರಿದವಂಗೆ ! ಫಲವೊಂದೇ ಫಡದರ್ಶನ ಮುಕ್ತಿಗೆ ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ
ನಾವು ಆಚರಿಸುವ ಆಚರಣೆಗಳಿಂದ ಮಾತ್ರ ಉತ್ತಮ ಅಧಮರೆನಿಸಿಕೊಳ್ಳುತ್ತೇವೆ, ಜಾತಿಯಿಂದಲ್ಲ. ನೆಲ ಒಂದೇ ಅಲ್ಲಿ ಶಿವಾಲಯಕಟ್ಟಿದರೆ ಪುಣ್ಯಕ್ಷೇತ್ರ, ದುರಾಚಾರಿಗಳ ತಾಣವಾದರೆ ಅದು ಹೊಲಗೇರಿ. ನೀರು ಒಂದೇ ಅದು ಪೂಜೆಗೆ ಬಳಸಿದರೆ ತೀರ್ಥ, ಶೌಚಕ್ಕೆ ಬಳಸಿದರೆ ಕೊಳಕು ನೀರು. ಅಂತೆಯೇ ಕಾರ್ಯದಿಂದ ಮಾನವ ಕುಲವೊಂದೆ ಉತ್ತಮ. ಜ್ಞಾನದಿಂದ ಉತ್ತಮ, ಅಜ್ಞಾನದಿಂದ ಅಧಮ ಆಯಾಜಾತಿಗಳ ಗುರಿ ಒಂದೇ ಅದುವೇ ಮುಕ್ತಿ ಮೇಲು ಕೀಳೆಂದು ಜಾತಿಯನ್ನು ವಿಂಗಡಿಸುವದನ್ನು ಈ ವಚನದಲ್ಲಿ ಖಂಡಿಸಿದ್ದಾರೆ.
ಕಳಬೇಡ ಕೊಲಬೇಡ ಹುಸಿಯ ನುಡಿಯಲುಬೇಡ
ಮುನಿಯಬೇಡ, ಅನ್ಯರಿಗೆ ಅಸಹ್ಯಪಡಬೇಡ
ತನ್ನ ಬಣ್ಣಿಸಬೇಡ, ಇದಿರ ಹಳಿಯಲುಬೇಡ
ಇದೇ ಅಂತರಂಗ ಶುದ್ಧಿ! ಇದೇ ಬಹಿರಂಗ ಶುದ್ಧಿ
ಇದೇ ನಮ್ಮ ಕೂಡಲ ಸಂಗಮದೇವನೊಲಿಸುವ ಪರಿ!!
ಕಳ್ಳತನ ಮಾಡಬೇಡ,ಕೊಲ್ಲಬೇಡ,ಸಿಟ್ಟುಮಾಡಬೇಡ, ಪರರ ದೂಷಣೆ ಮಾಡಬೇಡ, ಆತ್ಮ ಪ್ರಶಂಶೆಯಲ್ಲಿ ತೊಡಗಬೇಡ – ಇವುಗಳನ್ನು ಪಾಲಿಸುತ್ತ ಬಂದಲ್ಲಿ ಅಂತರಂಗವೂ-ಬಹಿರಂಗವೂ ಶುದ್ಧಿಯಾಗಿರುವುದು, ಇದೇ ಮಾರ್ಗ ದೇವರನೊಲಿಸುಕೊಳ್ಳುವದು. ಆತ್ಮೋದ್ಧಾರಕ್ಕೆ ಆತ್ಮಶುದ್ಧಿಗೆ ಇದೇ ಸರಳ ಮಾರ್ಗ ಎಂಬಂತೆ ಬಸವಣ್ಣ ತಿಳಿಸಿದ್ದಾರೆ.
ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲವಯ್ಯ, ಅಯ್ಯಾ ಎಂದರೆ ಸ್ವರ್ಗ ಎಲವೊ ಎಂದರೆ ನರಕ ಎಂದು ಸಾರುವ ಮೂಲಕ ಮಾನವಾತಾವಾದಕ್ಕೆ ಸಾಹಿತ್ಯದ ಸ್ಪರ್ಶ ನೀಡಿದರು. ಕನ್ನಡ ಸಾಹಿತ್ಯಕ್ಕೆ ವಚನಗಳ ಮೂಲಕ ಅವರ ಕೊಡುಗೆ ಅಪಾರ.
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment