February 18, 2026

Newsnap Kannada

The World at your finger tips!

N Manjunath appointed as BBMP Commissioner

N Manjunath appointed as BBMP Commissioner

ಬಿಬಿಎಂಪಿ ಆಯುಕ್ತರಿಗೂ ಕೊರೋನಾ ಸೋಂಕು ದೃಢ.

Spread the love

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಕರೋನಾ ಪಾಸಿಟಿವ್ ಧೃಡವಾಗಿದೆ.

ಮಂಗಳವಾರ ಕರೋನಾ ಪರೀಕ್ಷೆಗೆ ಒಳಪಟ್ಟಾಗ ಅವರಿಗೆ ಕರೋನ ಸೋಂಕು ಇರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಮಲ್ಲಿಗೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಆಯುಕ್ತರು‌ ಕೋವಿಡ್ ಮಾರ್ಗಸೂಚಿಯಂತೆ ಕ್ವಾರಂಟೈನ್ ನಲ್ಲಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಪ್ರಕರಣ ಕಡಿಮೆಯಾಗುತ್ತಿರುವ ಮಧ್ಯೆಯೇ ಬ್ರಿಟನ್ ನಲ್ಲಿ ಕಾಣಿಸಿಕೊಂಡ ಹೊಸ ರೂಪಾಂತರ ಕರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವುದು ಎಲ್ಲರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕರೋನಾ ಸೋಂಕು ಧೃಡಪಟ್ಟರೂ ಹೊಸರೂಪದ ಕರೋನಾ ವೈರಸ್ ನಿಂದ ಉದ್ಭವಿಸುವ ಸವಾಲಗಳನ್ನು ಎದುರಿಸಲು ಕ್ವಾರಂಟೈನ್ ನಲ್ಲಿರುವ ಆಯುಕ್ತ ಮಂಜುನಾಥ್ ಪ್ರಸಾದ್‌ ಕೋವಿಡ್ ಕರ್ತವ್ಯದಲ್ಲಿರುವ ವೈದ್ಯರು, ಅದಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳೊಂದಿಗೆ ನಿರಂತರವಾಗಿ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಾರೆ. ಅಗತ್ಯ ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ.

error: Content is protected !!