ಬಿಬಿಎಂಪಿ ಚುನಾವಣೆ ನಿಗದಿತ ಸಮಯಕ್ಕೆ – ಸಚಿವ ಆರ್‌ ಅಶೋಕ್

Team Newsnap
1 Min Read

ಬೆಂಗಳೂರು
ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಸೋಮವಾರ ಹೇಳಿದರು

ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆಯನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗ ಮಾತನಾಡಿ, ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್‌ ರಸ್ತೆ ನಿರ್ಮಾಣದ ಕಾರ್ಯ ಒಂದು ಹಂತ ಪೂರ್ಣ ಆಗಿದೆ. ಇನ್ನು ಕೆಲವು ಭಾಗದ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ. ಬೆಂಗಳೂರು ನಗರ ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಸೌಕರ್ಯ ಕೊಡುವ ಆಲೋಚನೆ ಇದೆ ಎಂದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಈ ರಸ್ತೆ ಕೊಡುಗೆ ನೀಡಲಿದೆ. ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್‌ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

Share This Article
Leave a comment